ಅಂಬಿಗರ ಚೌಡಯ್ಯ ಜಯಂತಿ, ಸಿದ್ದಗಂಗಾಶ್ರೀ ಸ್ಮರಣೆ

 ದಾವಣಗೆರೆ,  ಜ.21- ಇಡೀ ಜಗತ್ತಿಗೇ 12ನೇ ಶತಮಾನದಲ್ಲಿ ಕಾಯಕ ಶ್ರದ್ಧೆಯನ್ನು ಪರಿಚಯಿಸಿದವರು ಕಲ್ಯಾಣದ ಶರಣರು. ಅಂತಹವರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಕೂಡ ಒಬ್ಬರು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಶುಕ್ರವಾರ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಹಾಗೂ ಶ್ರೀ ಶಿವಕುಮಾರ ಸ್ವಾಮಿಜೀಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರು ಮಾತನಾಡಿದರು.

ಕಾಯಕದಿಂದ ಗಳಿಸಿದ ಸಂಪತ್ತನ್ನು ನಾವು ಬಳಸಿ, ಬೇರೆಯವರಿಗೂ ಸಹ ಹಂಚುವ ಮನೋಭಾವವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳವುದರ ಜೊತೆಗೆ ಹಸಿದವರಿಗೆ ಅನ್ನ ನೀಡುವ ಕೆಲಸವನ್ನು ಮಾಡುವ ಮೂಲಕ ಎಲ್ಲರ ಮನೆಗಳು ಮಠಗಳಂತೆ ಕಾರ್ಯ ನಿರ್ವಹಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಡಿಯುಡಿಸಿ ಯೋಜನಾಧಿಕಾರಿ ನಜ್ಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜಾನಾಯ್ಕ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಪ್ಪ ಎಸ್‍ಪಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅವಿತ್ ಬಿದರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಕೆ.ಹೆಚ್ ವಿಜಯ್‍ಕುಮಾರ್, ಗಂಗಾಮತ ಸಮಾಜದ ಅಧ್ಯಕ್ಷ ಬಿ.ಕೆ. ಮಂಜುನಾಥ್ ಮಾಗಾನಹಳ್ಳಿ,  ಚೌಡಯ್ಯ ಗುರುಪೀಠದ ಉಪಾಧ್ಯಕ್ಷ ಮಂಜುನಾಥ ಡಿ. ಪುಟಗನಾಳ್, ಕಾರ್ಯದರ್ಶಿ ಮಹೇಂದ್ರ ಹೆಬ್ಬಾಳ್, ನಿಂಗರಾಜ ಹಾವನೂರು, ಎಸ್.ಎಂ ಸುರೇಶ್, ಯೋಗೇಶ್ ಹೊಸಕೆರೆ, ತಿಪ್ಪೇಶ್, ಶೋಭಾ ಮಂಜುನಾಥ, ಮೀನಾಕ್ಷಿ ವೆಂಕಟೇಶ್ ಹಾಗೂ ಇತರರು ಹಾಜರಿದ್ದರು.

error: Content is protected !!