ಹೊನ್ನಾಳಿ ತಾ. ನೆಲಹೊನ್ನೆ ಗ್ರಾಮದಲ್ಲಿ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮ

ಹೊನ್ನಾಳಿ, ಜ. 24- ತಾಲ್ಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಆಯುಷ್ ಇಲಾಖೆಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವತಿಯಿಂದ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.

ಹಿರಿಯ ವೈದ್ಯಾಧಿಕಾರಿ ಡಾ. ಸಿದ್ದೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಪಿ. ರಮೇಶ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಮುರುಳೀಧರ್ ನಾಯ್ಕ,  ತಜ್ಞ ವೈದ್ಯರುಗಳಾದ ಡಾ. ಯಶವಂತ್, ಡಾ. ಸೈಯದ್ ಶಂಶುದ್ದೀನ್, ಡಾ. ಅನುರಾಧ, ಡಾ. ಪ್ರೀತಿ  ಉಪಸ್ಥಿತರಿದ್ದರು.

ಕುಂಬಳೂರು ಗ್ರಾ.ಪಂ. ಅಧ್ಯಕ್ಷ ವಿಕಾಸ್ ಅಧ್ಯಕ್ಷತೆ ವಹಿಸಿದ್ದರು. ಡಾ. ಚಂದ್ರಕಾಂತ್ ಎಸ್. ನಾಗಸಮುದ್ರ ಸ್ವಾಗತಿಸಿದರು.

error: Content is protected !!