ಜಿಲ್ಲೆಯಲ್ಲಿ ಕಾಂಗ್ರೆಸ್ ಆನ್‍ಲೈನ್‍ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಲು ಕರೆ

ದಾವಣಗೆರೆ, ಜ.24 – ಕಾಂಗ್ರೆಸ್ ಪಕ್ಷದ ಆನ್‍ಲೈನ್ ಸದಸ್ಯತ್ವ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಸದಸ್ಯತ್ವ ನೋಂದಣಿ ಮಾಡುವ ಮೂಲಕ ಜಿಲ್ಲೆಯ ಮುಖಂಡರುಗಳಾದ ಡಾ. ಶಾಮನೂರು ಶಿವಶಂಕರಪ್ಪ,  ಶಾಮನೂರು ಮಲ್ಲಿಕಾರ್ಜುನ್ ಅವರ ಕೈ ಬಲಪಡಿಸೋಣ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಕರೆ ನೀಡಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಅನಿತಾ ಬಾಯಿ ಮಾಲತೇಶರಾವ್ ಜಾಧವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಆನ್‍ಲೈನ್ ಸದಸ್ಯತ್ವ ಅಭಿಯಾನದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಕೆ.ಎಲ್. ಹರೀಶ್ ಬಸಾಪುರ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಎಸ್. ಮಲ್ಲಿಕಾರ್ಜುನ್, ಜಿಲ್ಲಾ ವಕ್ತಾರ ಎಂ. ನಾಗೇಂದ್ರಪ್ಪ, ಪಾಲಿಕೆ ಸದಸ್ಯರುಗಳಾದ ಸುಧಾ ಇಟ್ಟಿಗುಡಿ ಮಂಜುನಾಥ್, ಸವಿತಾ ಹುಲ್ಮನಿ ಗಣೇಶ್, ಮಹಿಳಾ ಕಾಂಗ್ರೆಸ್‍ನ ಸ್ಮಿತಾ ಪಾಟೀಲ್, ಆಶಾ ಮುರುಳಿ, ರಾಜೇಶ್ವರಿ, ಶುಭಮಂಗಳ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!