ಅಂಬೇಡ್ಕರ್‌ಗೆ ಅವಮಾನಿಸಿದ ನ್ಯಾಯಾಧೀಶರ ವಜಾಕ್ಕೆ ಡಿಎಸ್ಎಸ್ ಆಗ್ರಹ

ದಾವಣಗೆರೆ, ಫೆ.2- ಡಾ. ಬಿ.ಆರ್. ಅಂಬೇಡ್ಕರ್‍ ಅವರನ್ನು ಅವಮಾನಿಸಿದ ರಾಯಚೂರು ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಹಾಗೂ ನ್ಯಾಯಾಧೀಶರ ಹುದ್ದೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ್ದ ಸಮಿತಿ ಪದಾಧಿಕಾರಿಗಳು ಪ್ರತಿಭಟಿಸಿ, ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರ ತೆಗೆಸಿ, ಧ್ವಜಾರೋಹಣ ಮಾಡಿರುವುದು ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಮಾಡಿರುವ ಅವಮಾನವಾಗಿದೆ. ಇಂತಹ ಕೆಲಸವನ್ನು ಪೂರ್ವಾಗ್ರಹ ಪೀಡಿತ ಮನಸುಗಳು ಮಾತ್ರ ಮಾಡಲು ಸಾಧ್ಯ ಎಂದು ಸಮಿತಿಯ ರಾಜ್ಯ ಸಂಚಾಲಕ ಹೆಚ್. ಮಲ್ಲೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಹೆಚ್.ಸಿ. ಮಲ್ಲಪ್ಪ, ಎಸ್. ವೆಂಕಟೇಶ್, ಸೀತಮ್ಮ ಆವರಗೆರೆ, ಸಮಾದೆಪ್ಪ ಶಾಮನೂರು, ಬಿ.ಎಸ್. ಲೋಕೇಶ್, ಎಂ. ಚಂದ್ರಪ್ಪ ಶಿವು, ಚನ್ನಬಸಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

error: Content is protected !!