42ನೇ ವಾರ್ಡಿನ ಕಾಮಗಾರಿಗಳಿಗೆ ಭೂಮಿ ಪೂಜೆ

ದಾವಣಗೆರೆ, ಫೆ.4- ನಗರ ಪಾಲಿಕೆ 42 ನೇ ವಾರ್ಡಿನಲ್ಲಿ 15ನೇ ಹಣಕಾಸು ಯೋಜನೆಯಡಿ, 25 ಲಕ್ಷ ರೂ.ಗಳ ಕಾಮಗಾರಿಗಳಿಗೆ ಮಹಾಪೌರ ಎಸ್.ಟಿ.ವೀರೇಶ್, 42ನೇ ವಾರ್ಡಿನ ಪಾಲಿಕೆ ಸದಸ್ಯರಾದ ಗೌರಮ್ಮ ಗಿರೀಶ್ ಅವರುಗಳು ಭೂಮಿ ಪೂಜೆ ಮಾಡುವುದರ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

15ನೇ ಹಣಕಾಸು ಯೋಜನೆಯಡಿಯಲ್ಲಿ ನಗರದ ಸಿದ್ದವೀರಪ್ಪ 10ನೇ ಮೇನ್‌, 10ನೇ ಕ್ರಾಸ್‌ನಲ್ಲಿ 25 ಲಕ್ಷ ರೂ.ಗಳ ಸಿ.ಸಿ ರಸ್ತೆ, ಒಳಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಪ್ರಸನ್ನಕುಮಾರ್, ಬಿಜೆಪಿ ಮುಖಂಡ ನರೇಂದ್ರಕುಮಾರ್, ಎಸ್.ಜಿ.ಗಿರೀಶ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಸಚಿನ್ ಮತ್ತಿತರರು  ಉಪಸ್ಥಿತರಿದ್ದರು.

error: Content is protected !!