ಪಿಡಬ್ಲ್ಯೂಡಿ ಸರ್ಕಾರಿ ಶಾಲೆಗೆ ಅಗತ್ಯ ಸೌಲಭ್ಯ

ಮಲೇಬೆನ್ನೂರು, ಫೆ.6- ಪಟ್ಟಣದ ಪಿಡಬ್ಲ್ಯೂಡಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾವಣಗೆರೆಯ ಯುವ ಮುಖಂಡ ಶ್ರೀನಿವಾಸ್ ಟಿ.ದಾಸಕರಿಯಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದವರು ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರೀನಿವಾಸ್ ದಾಸಕರಿಯಪ್ಪ ಮಾತನಾಡಿ, ಈ ಶಾಲೆಗೆ ಅಗತ್ಯವಿರುವ ಡೆಸ್ಕ್‌ಗಳನ್ನು ಕೊಡುಗೆಯಾಗಿ ನೀಡುವುದಾಗಿ ಭರವಸೆ ನೀಡಿ, ಸರ್ಕಾರಿ ಶಾಲೆಗಳಿಗೆ ಎಲ್ಲರ ಪ್ರೋತ್ಸಾಹ ಅಗತ್ಯವಾಗಿದೆ ಎಂದರು.

ಎಪಿಎಂಸಿ ಅಧ್ಯಕ್ಷ ಜಿ.ಮಂಜುನಾಥ್ ಪಟೇಲ್, ತಾಲ್ಲೂಕು ಕುರುಬ ಸಮಾಜದ ಕಾರ್ಯದರ್ಶಿ ಕೆ.ಪಿ.ಗಂಗಾಧರ್ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಬೆಣ್ಣೆಹಳ್ಳಿ ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು.

ಗಂಗಾಮತ ಸಮಾಜದ ಯುವ ಮುಖಂಡ ಕುಂಬಳೂರು ವಾಸು, ಶ್ರೀನಿವಾಸ್ ದಾಸಕರಿಯಪ್ಪ ಅಭಿಮಾನಿ ಬಳಗದ ಬಸವರಾಜ್ ದೊಡ್ಮನಿ, ಹರಿಹರದ ಭರತ್, ಮಂಜುನಾಥ್, ಕಜ್ಜರಿ ಹರೀಶ್, ಡಿ.ಜೆ. ರಮೇಶ್, ಶ್ರೀನಿವಾಸ್, ಆಕಾಶ್ ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕ ಗೋವಿಂದಪ್ಪ ಸಾವಜ್ಜಿ ಸ್ವಾಗತಿಸಿದರು. ಪತ್ರಕರ್ತ ಜಿಗಳಿ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಿಕ್ಷಕಿ ಸುನೀತಾ ನಿರೂಪಿಸಿದರು. ಶಿಕ್ಷಕ ಬಿ.ಹೆಚ್.ಶಿವಕುಮಾರ್ ವಂದಿಸಿದರು.

error: Content is protected !!