ರೈಲ್ವೆ ನಿಲ್ದಾಣದಲ್ಲಿ ಮಾದಕ ಸೇವನೆ ದುಷ್ಪರಿಣಾಮ ಜಾಗೃತಿ

ದಾವಣಗೆರೆ, ಫೆ.11- ಇಲ್ಲಿನ ರೈಲ್ವೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಮುಸ್ತಾಕ್ ಅಹಮ್ಮದ್ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿ ನಗರದ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಕುರಿತು ಪ್ರಯಾಣಿಕರಿಗೆ ಮತ್ತು ರೈಲು ಗಾಡಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಜಾಗೃತಿ ಮೂಡಿಸಿದರು. ಈ ವೇಳೆ ರೈಲ್ವೆ ಪ್ರಯಾಣಿಕರಿಗೆ ತುರ್ತು ಸಂದರ್ಭದಲ್ಲಿ ಸಹಾಯ ಹಸ್ತ ಮತ್ತು ಸುರಕ್ಷತೆಯ ಬಗ್ಗೆ  ಭರವಸೆ ಮೂಡಿಸಲಾಯಿತು.

error: Content is protected !!