ಹೊನ್ನಾಳಿಯಲ್ಲಿ ಯೋಧರಿಗೆ ಶ್ರದ್ಧಾಂಜಲಿ

ಹೊನ್ನಾಳಿ,ಫೆ.15- ಪುಲ್ವಾಮ ದಾಳಿಯಂತಹ ಪ್ರಕರಣಗಳು ಮತ್ತೆ  ಮರುಕಳಿಸದಂತೆ ಕೇಂದ್ರ ಸರ್ಕಾರವು ವಿಶೇಷ ಗಮನಹರಿಸಬೇಕು ಎಂದು ಪುರಸಭಾ ಸದಸ್ಯ ಹೊಸಕೇರಿ ಸುರೇಶ್ ಒತ್ತಾಯಿಸಿದರು.

ಪಟ್ಟಣದ ದುರ್ಗಿಗುಡಿ ಬಡಾವಣೆಯಲ್ಲಿ ಪುಲ್ವಾಮ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಪತ್ರಕರ್ತ ಕೋರಿ ಯೋಗೀಶ್ ಕುಳಗಟ್ಟೆ, ಪಟ್ಟಣದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ರುದ್ರಪ್ಪ ಮಾತನಾಡಿದರು. ಲಿಂಗಾಪುರದ ಗ್ರಾಮ ಒನ್ ವ್ಯವಸ್ಥಾಪಕ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!