ಜಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ

ಶಾಸಕರ ನೇತೃತ್ವದಲ್ಲಿ ವಿಜಯೋತ್ಸವ

ಜಗಳೂರು, ಮಾ.10- ಪಂಚ ರಾಜ್ಯದ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ  ಬಾರಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಶಾಸಕ ಎಸ್.ವಿ.ರಾಮಚಂದ್ರ ಅವರ ನೇತೃತ್ವದಲ್ಲಿ ಪಟ್ಟಣದ ಮಹಾತ್ಮಗಾಂಧಿ ವೃತ್ತದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ನಂತರ  ಮಾತನಾಡಿದ ಶಾಸಕರು,  ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ ಉತ್ತರಖಂಡ, ಉತ್ತರಪ್ರದೇಶ, ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿಗೆ ಮತ ನೀಡಿ ಅಧಿಕಾರ ನೀಡಿದ್ದಾರೆ ಎಂದರು.

ಬಿಜೆಪಿಯ ಗೆಲವು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಕಾರ್ಯಕರ್ತರು ಶ್ರಮಿಸ ಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ  ಪ.ಪಂ ಅಧ್ಯಕ್ಷ ಸಿದ್ದಪ್ಪ, ಉಪಾ ಧ್ಯಕ್ಷೆ ಮಂಜಮ್ಮ, ಸದಸ್ಯರಾದ ಆರ್.ತಿಪ್ಪೇಸ್ವಾಮಿ, ದೇವರಾಜ್, ಪಾಪಲಿಂಗಪ್ಪ, ನಾಮನಿರ್ದೇಶಿತ ಸದಸ್ಯರಾದ ಬಿ.ಪಿ.ಸುಬಾನ್, ಬಿ. ರುದ್ರಮುನಿ. ವಿಎಸ್‌ಎಸ್‌ಎನ್ ಅಧ್ಯಕ್ಷ ಬಿಸ್ತುವಳ್ಳಿ ಬಾಬು, ಮುಖಂಡರಾದ ಜೆ.ವಿ.ನಾಗರಾಜ್, ಆರಾದ್ಯ, ಎ.ಎಂ. ಕಾಂತರಾಜ್, ಕಸ್ತೂರಿಪುರ ಶಿವಣ್ಣ, ಬಿ.ರವಿಕುಮಾರ್, ವೀರೇಶ್, ಹನುಮಂತಪ್ಪ, ಗೌರಿಪುರ ಶಿವಣ್ಣ, ಅರವಿಂದ್, ಓಬಳೇಶ್, ರಮೇಶ್ ಇತರರು ಭಾಗವಹಿಸಿದ್ದರು.

error: Content is protected !!