ದಾವಣಗೆರೆ, ಮಾ.13- ನಗರದ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ವತಿಯಿಂದ ಶನಿವಾರ ಜಿಲ್ಲಾ ವರದಿಗಾರರ ಕೂಟಕ್ಕೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಕೆ. ಏಕಾಂತಪ್ಪ ಮತ್ತು ನಿಕಟಪೂರ್ವ ಅಧ್ಯಕ್ಷ ಜೆ.ಎಂ.ಆರ್. ಆರಾಧ್ಯ ಅವರನ್ನು ದುರ್ಗಾಂಬಿಕಾ ದೇವಿಯ ಸನ್ನಿದಿಯಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಗೌಡ್ರು ಚನ್ನಬಸಪ್ಪ, ಬಿ.ಹೆಚ್.ವೀರಭದ್ರಪ್ಪ ಅವರುಗಳು ಸನ್ಮಾನಿಸಿ, ಶುಭ ಹಾರೈಸಿದರು.
July 5, 2024