ಕುಂದುವಾಡದ ಬಳಿಯ ರಸ್ತೆ ಅಪಘಾತ : ಸವಾರ ಸಾವು

ದಾವಣಗೆರೆ ಜ.6- ಬೈಕ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡು ಸವಾರನೋರ್ವ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಕುಂದುವಾಡ ಸಮೀಪದ ರಸ್ತೆಯಲ್ಲಿ ಇಂದು ನಡೆದಿದೆ.

ಎಸ್‌.ಎಂ. ಕೃಷ್ಣ ನಗರದ ತರಗಾರ ಬಸವರಾಜ (36) ಮೃತ ಸವಾರ. ರಾಣೇಬೆನ್ನೂರು ತಾಲ್ಲೂಕಿನ ಅರೆಮಲ್ಲಾಪುರ ಗ್ರಾಮಕ್ಕೆ ಬೈಕ್ ನಲ್ಲಿ ಸಾಗುವಾಗ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!