ನಗರದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಮಹಾಂತೇಶ ಪಾಟೀಲ್

ದಾವಣಗೆರೆ, ಜ.8- ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಮಹಾಂತೇಶ ಪಾಟೀಲ್ ನಗರಕ್ಕೆ ಆಗಮಿಸಿದ್ದರು. 

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಮನೆ ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಜದ ಸಂಘಟನೆಯ ಬಗ್ಗೆ ಚರ್ಚಿಸಿದರು.  ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಖಿಲ್ ಕೊಂಡಜ್ಜಿ, ಉಪಾಧ್ಯಕ್ಷ ಸಂದೀಪ್ ಅಣಬೇರು, ಜಿಲ್ಲಾ ಧ್ಯಕ್ಷ ಆರ್.ಟಿ. ಪ್ರಶಾಂತ್‌, ನಗರ ಘಟಕದ ಅಧ್ಯಕ್ಷ ಶಂಭು ಉರೇಕೊಂಡಿ, ನಗರ ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಶಿವನಗೌಡ ಪಾಟೀಲ, ಟಿಂಕರ್ ಮಂಜಣ್ಣ, ಗಂಗಾಧರ್‌, ಎಲ್.ಎಸ್.ದೇವೇಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

error: Content is protected !!