ವಾಲ್ಮೀಕಿ ಶ್ರೀಗಳ ಧರಣಿ ಸತ್ಯಾಗ್ರಹಕ್ಕೆ ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಬೆಂಬಲ

ಹರಪನಹಳ್ಳಿ, ಮಾ. 29- ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು  ವಾಲ್ಮೀಕಿ ನಾಯಕ ಸಮುದಾಯಕ್ಕೆ 7.5 ಮೀಸಲಾತಿ  ಹೆಚ್ಚಳ ಸೇರಿದಂತೆ  ವಿವಿಧ ಬೇಡಿಕೆಗಳನ್ನು  ಈಡೇರಿಸುವಂತೆ  ಬೆಂಗಳೂರಿನ  ಫ್ರೀಡಂ ಪಾರ್ಕಿನಲ್ಲಿ ಕೈಗೊಂಡಿರುವ ಧರಣಿ ಸತ್ಯಾಗ್ರಹದಲ್ಲಿ  ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ನಾಯಕರು ಭಾಗವಹಿಸಿ, ಬೆಂಬಲ ವ್ಯಕ್ತ ಪಡಿಸಿದರು.

ಈ ವೇಳೆ ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ ಸದಸ್ಯ ಶಶಿಧರ ಪೂಜಾರ ಮಾತನಾಡಿ, ರಾಜ್ಯದಲ್ಲಿ ಸರ್ಕಾರಕ್ಕೆ ಏನಾದರೂ ಕಣ್ಣು, ಕಿವಿ ಇದ್ದರೆ ದೊಡ್ಡಶಕ್ತಿಯಾಗಿ ಕುಳಿತಿರುವ ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಗಳು 47 ದಿನ ಧರಣಿ ನಿರತ ಪ್ರತಿಭಟನೆಯ ಕಡೆ ಗಮನ ಹರಿಸಬೇಕು.  ಮುಖ್ಯಮಂತ್ರಿಗಳು  ಗಮನ ಹರಿಸದಿರುವುದು ದುರದೃಷ್ಟಕರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಜಿ.ಪಂ. ಮಾಜಿ ಸದಸ್ಯ ಹೆಚ್.ಬಿ.ಪರಶುರಾಮಪ್ಪ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮುತ್ತಿಗಿ ಜಂಬಣ್ಣ, ಟಿ.ಎ.ಪಿ.ಸಿ.ಎಂ.ಎಸ್. ಮಾಜಿ ಅಧ್ಯಕ್ಷ ಪಿ.ಪ್ರೇಮಕುಮಾರ,  ಯುವ ಮುಖಂಡ ಎಂ.ಬಿ.ಯಶವಂತಗೌಡ, ಚಿಗಟೇರಿ ಮುಖಂಡರಾದ ಜಂಬಣ್ಣ, ನೀಲಗುಂದ ಬಿ. ವಾಗೀಶ್, ಅಲಮರಸಿಕೇರಿ ಪರಶುರಾಮ, ಮಹಾಂತೇಶ್‍ನಾಯ್ಕ ಉಪಸ್ಥಿತರಿದ್ದರು. 

error: Content is protected !!