ಶ್ರವಣದೋಷವುಳ್ಳ ವಿಕಲಚೇತನರಿಗೆ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ

ದಾವಣಗೆರೆ ಜ.15 – ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಶ್ರವಣದೋಷವುಳ್ಳ ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಳ್ಳಲು 15 ಹೊಲಿಗೆ ಯಂತ್ರಗಳನ್ನು ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು  ಶೇ. 40ಕ್ಕಿಂತ ಹೆಚ್ಚಿನ ಶ್ರವಣ ದೋಷವುಳ್ಳವರಾಗಿ ರಬೇಕು. ಕನಿಷ್ಟ 10 ವರ್ಷಗಳ ಕಾಲ ಕರ್ನಾಟಕ ವಾಸಿಯಾಗಿದ್ದು ಸಕ್ಷಮ ಪ್ರಾಧಿಕಾರದಿಂದ ವಾಸ ಸ್ಥಳ ದೃಢೀಕರಣ ಪತ್ರ ಹೊಂದಿರಬೇಕು. ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಇದೇ ದಿನಾಂಕ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.  ಮಾಹಿತಿಗಾಗಿ ದೂ.ಸಂ:08192263939/263936 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಿ.ಎಸ್ ಶಶಿಧರ್ ತಿಳಿಸಿದ್ದಾರೆ.

error: Content is protected !!