ದೀಕ್ಷಿತ್ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ದಾವಣಗೆರೆ ಕೆ.ಬಿ. ಬಡಾವಣೆ ದೀಕ್ಷಿತ್ ರಸ್ತೆಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ ದಲ್ಲಿ ಕಳೆದ ವಾರ ಏರ್ಪಾಡಾಗಿದ್ದ ಕಾರ್ತಿಕ ದೀಪೋತ್ಸವದಲ್ಲಿ ಭಕ್ತಾದಿಗಳು ದೀಪ ಬೆಳಗಿಸುವುದರ ಮೂಲಕ ತಮ್ಮ ಶ್ರದ್ಧಾ-ಭಕ್ತಿ ಸಮರ್ಪಿಸಿದರು. ನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ. ವೀರೇಶ್, ನಗರಸಭೆ ಮಾಜಿ ಅಧ್ಯಕ್ಷ ಕೆ.ಜಿ. ಶಿವಕುಮಾರ್ ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!