ಎಸ್.ವಿ. ರಾಮಚಂದ್ರ ಅವರ ಜನ್ಮದಿನಕ್ಕೆ ಅಭಿಮಾನಿಗಳ ಹಾರೈಕೆ

ದಾವಣಗೆರೆ, ಜ.16- ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರೂ, ಜಗಳೂರು ಶಾಸಕರೂ ಆದ ಎಸ್.ವಿ. ರಾಮಚಂದ್ರ ಅವರು ತಮ್ಮ ಜನ್ಮದಿನವನ್ನು ದಾವಣಗೆರೆಯ ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡರು. ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶಾಂತಕುಮಾರಿ ಸೇರಿದಂತೆ ಜನಪ್ರತಿನಿಧಿಗಳು, ಅಭಿಮಾನಿಗಳು ನಿವಾಸಕ್ಕೆ ಆಗಮಿಸಿ ಜನ್ಮದಿನದ ಶುಭಾಶಯ ಕೋರಿದರು. ಪತ್ನಿ ಶ್ರೀಮತಿ ಇಂದಿರಾ ರಾಮಚಂದ್ರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!