ಕದಳಿ ಮಹಿಳಾ ವೇದಿಕೆಯಿಂದ ಜಯಶೀಲಾ ಹೆಚ್ಚೆನ್ನೆಸ್ ಅವರಿಗೆ ಸನ್ಮಾನ

ದಾವಣಗೆರೆ, ಜ.18- ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಂಗ ಸಂಸ್ಥೆಯಾದ ಕದಳಿ ಮಹಿಳಾ ವೇದಿಕೆಯ 12ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವೇದಿಕೆಯ ಗೌರವಾಧ್ಯಕ್ಷರಾದ ಶ್ರೀಮತಿ ಜಯಶೀಲಾ ಹೆಚ್.ಎನ್. ಷಡಾಕ್ಷರಪ್ಪ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯ ಪದಾಧಿಕಾರಿಗಳಿಗೆ ಸೂಕ್ತ ಸಲಹೆ – ಮಾರ್ಗದರ್ಶನ ಮಾಡುವುದರ ಜೊತೆಗೆ, ವೇದಿಕೆಯ ಎಲ್ಲಾ ಕಾರ್ಯಕ್ರಮಗಳಿಗೆ ನೀಡುತ್ತಿದ್ದ ಪ್ರೋತ್ಸಾಹವನ್ನು ಮೆಲುಕು ಹಾಕುವುದರೊಂದಿಗೆ ಜಯಶೀಲಾ ಅವರನ್ನು ಶಾಲು ಹೊದಿಸಿ, ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಪಾಟೀಲ್, ಶ್ರೀಮತಿ ಸುಧಾ ದಿಬ್ದಳ್ಳಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!