ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ

ಶಿವಮೊಗ್ಗ, ಜ.20- ಭದ್ರಾ ಕಾಡಾ ವ್ಯಾಪ್ತಿಯಲ್ಲಿ ನಿಷ್ಕ್ರಿಯಗೊಂಡಿರುವ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಪುನಶ್ಚೇತನಗೊಳಿಸಬೇಕೆಂದು ಇಂದು ನಡೆದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ 100ನೇ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನಿಸಲಾಯಿತು.

2705.4705 ಲೆಕ್ಕ ಶೀರ್ಷಿಕೆಯ ಹಾಗೂ ನಬಾರ್ಡ್‌ ಯೋಜನೆ ಕೇಂದ್ರ ಸರ್ಕಾರದ ಪಿಎಂಕೆಎಸ್‌ವೈ ಯೋಜನೆಗಳ ಪ್ರಗತಿ, 2020-21ನೇ ಸಾಲಿನ ಆಯ-ವ್ಯಯ ಪ್ರಸ್ತಾವನೆ ಅಂಗೀಕಾರದ ಬಗ್ಗೆ ಸದಸ್ಯರು ಚರ್ಚಿಸಿ ಒಪ್ಪಿಗೆ ಸೂಚಿಸಿದರು.

ಕಾಡಾ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅಧ್ಯಕ್ಷತೆ ವಹಿಸಿದ್ದರು.ನಿರ್ದೇಶಕ ಬಿ.ಎಂ. ಷಣ್ಮುಖಯ್ಯ ಆವರಗೊಳ್ಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

error: Content is protected !!