ಕಡ್ಲೆಬಾಳು ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾಗಿ ಸತ್ಯನಾರಾಯಣ

ಕಡ್ಲೆಬಾಳು ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾಗಿ ಸತ್ಯನಾರಾಯಣ - Janathavaniದಾವಣಗೆರೆ, ಮಾ.31- ತಾಲ್ಲೂಕಿನ ಕಡ್ಲೆಬಾಳು ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಿ. ಸತ್ಯನಾರಾಯಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮೇಕಾ ಮುರಳಿಕೃಷ್ಣ, ಕಡ್ಲೆಬಾಳು ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಹಾಲಿ ನಿರ್ದೇಶಕರು ಹಾಗೂ ಮಾಜಿ ಅಧ್ಯಕ್ಷ ಹೆಚ್‌.ಎಸ್‌. ಉಜ್ಜಪ್ಪ, ಕಡ್ಲೆಬಾಳು ಗ್ರಾ.ಪಂ. ಮಾಜಿ ಅಧ್ಯಕ್ಷರು, ಹಾಲಿ ಸದಸ್ಯ ಬಿ.ಕೆ. ಪರಶುರಾಮ, ಸಂಘದ ನಿರ್ದೇಶಕರುಗಳು, ಕಾರ್ಯದರ್ಶಿ ಜಿ. ಹನುಮಂತಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಹಕಾರ ಅಭಿವೃದ್ಧಿ ಅಧಿಕಾರಿ ಸುರೇಂದ್ರ ಚುನಾವಣಾಧಿಕಾರಿಯಾಗಿದ್ದರು.

error: Content is protected !!