ರಸ್ತೆ ಅಪಘಾತದಲ್ಲಿ ಮಡಿದ ಮಹಿಳೆಯರ ಕುಟುಂಬಗಳಿಗೆ ಪರಿಹಾರಕ್ಕೆ ಒತ್ತಾಯ

ರಸ್ತೆ ಅಪಘಾತದಲ್ಲಿ ಮಡಿದ ಮಹಿಳೆಯರ ಕುಟುಂಬಗಳಿಗೆ ಪರಿಹಾರಕ್ಕೆ ಒತ್ತಾಯ - Janathavaniದಾವಣಗೆರೆ,ಫೆ.1- ಧಾರವಾಡದ ಬಳಿ ಈಚೆಗೆ ನಡೆದ ರಸ್ತೆ ಅಪಘಾತದಲ್ಲಿ ಮಡಿದ ನಗರದ 10 ಜನ ಮಹಿಳೆಯರೂ ಸೇರಿದಂತೆ, ಎಲ್ಲಾ 12 ಜನರಿಗೆ ನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಈ ಆಕಸ್ಮಿಕ ಅಪಘಾತದಲ್ಲಿ ಮಡಿದ ಪ್ರತಿಯೊಬ್ಬರ ಕುಟುಂಬಕ್ಕೆ ರಾಜ್ಯ, ಕೇಂದ್ರ ಸರ್ಕಾರದಿಂದ ಒಟ್ಟಾಗಿ ತಲಾ 50 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕೆಂದು ನಾಗರಾಜ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜೊತೆಗೆ, ಇದೇ ರೀತಿ ಹಲವು ಬಾರಿ ಈ ಸ್ಥಳದಲ್ಲಿ ರಸ್ತೆ ಅಪಘಾತಗಳು ನಡೆದಿದ್ದು, ನೂರಾರು ಜೀವಗಳನ್ನು ಬಲಿ ಪಡೆದಿವೆ. ಸ್ಥಳೀಯ ಸಹೋದರಿ ಯರು ಅಪಘಾತದಲ್ಲಿ ಮರಣ ಹೊಂದಿದ ಬಗ್ಗೆ ಸುಪ್ರೀಂ ಕೋರ್ಟ್‌, ಕರ್ನಾಟಕ ಸಾರಿಗೆ ವಿಭಾಗದ ಪ್ರಧಾನ ಕಾರ್ಯದರ್ಶಿಗಳಿಗೆ ನೋಟೀಸ್ ಜಾರಿ ಮಾಡಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಕೂಡಲೇ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವಾಗುವಂತೆ ಅಭಿವೃದ್ಧಿ ಪಡಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

 

error: Content is protected !!