ಜಿ.ಪಂ., ತಾ.ಪಂ. ಗೆಲುವಿಗೆ ಮಹತ್ವದ ಪಾತ್ರ

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ಕೊಂಡಜ್ಜಿ

ದಾವಣಗೆರೆ, ಏ.5- ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ಆರ್. ಕೊಂಡಜ್ಜಿ ತಿಳಿಸಿದರು.

ನಾನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಆಯ್ಕೆಯಾದ ನಂತರ ಬ್ಲಾಕ್‍ ವಾರು ಪ್ರವಾಸ ಕೈಗೊಂಡು ಸಮಿತಿಗಳ ರಚನೆಗೆ ತಾಲೂಕು ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆಯಂತೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕೈಗೊಂಡು, ಬಿಜೆಪಿ ದುರಾಡಳಿತದ ವಿರುದ್ಧ ಸಂಘರ್ಷ ನಡೆಸಲು ಉದ್ದೇಶಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಯುವ ಕಾಂಗ್ರೆಸ್ ಮತ್ತು ವಿದ್ಯಾರ್ಥಿ ಘಟಕಗಳು ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭ ಗಳಾಗಿವೆ.  ಪಕ್ಷ ಬಲಿಷ್ಠವಾಗಿಸುವ ನಿಟ್ಟಿನಲ್ಲಿ ಪ್ರತಿಭಟನೆ ಮಾಡುವುದು ಮಾತ್ರ ಯುವ ಕಾಂಗ್ರೆಸ್ ಕಾರ್ಯವಲ್ಲ. ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಒತ್ತು ಕೊಡುತ್ತೇವೆ. ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು.

ಗೋಷ್ಠಿಯಲ್ಲಿ ಯುವ ಕಾಂಗ್ರೆಸ್‍ನ ಹೆಚ್.ಜೆ. ಮೈನುದ್ದೀನ್, ಕೆ.ಎಲ್. ಹರೀಶ್ ಬಸಾಪುರ, ಸೈಯದ್ ಇರ್ಫಾನ್, ತಿಪ್ಪೇಶ್, ಮಹಮದ್ ವಾಜೀದ್, ಮಹಮದ್ ರಫೀಕ್ ಇದ್ದರು.

error: Content is protected !!