ನವ ವಿವಾಹಿತೆಯ ಸಾವು : ವರದಕ್ಷಿಣೆ ಕಿರುಕುಳ ಆರೋಪ

ದಾವಣಗೆರೆ, ಜೂ. 30- ನವ ವಿವಾಹಿತೆ ಸಾವಿಗೀಡಾಗಿದ್ದು, ಇದು ವರದಕ್ಷಿಣೆ ಕಿರುಕುಳ ಎಂದು ಆರೋಪಿಸಲಾಗಿದೆ.ಹೊಸ ಕುಂದವಾಡ ಗ್ರಾಮದ ರೂಪಾ (23) ಸಾವಿಗೀಡಾಗಿರುವ ನವ ವಿವಾಹಿತೆ. ಹನುಮನಹಳ್ಳಿ ಗ್ರಾಮದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ.

ಕಳೆದ ವರ್ಷ ಡಿಸೆಂಬರ್‍ನಲ್ಲಿ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದ ಜಯಪ್ರಕಾಶ್ ಎಂಬಾತನೊಂದಿಗೆ ಈಕೆಯ ವಿವಾಹವಾಗಿತ್ತು. ಮದುವೆಯಾಗಿ ಆರು ತಿಂಗಳ ನಂತರ ಜಯಪ್ರಕಾಶ್ ಆಕೆಗೆ ವರದಕ್ಷಿಣೆ ಕಿರುಕುಳ ಕೊಡಲು ಆರಂಭಿಸಿದ್ದಾನೆ. ಜೊತೆಗೆ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ ಎನ್ನಲಾಗಿದೆ.  ಆಕೆ ಆತ್ಮಹತ್ಯೆ ಮಾಡಿಕೊಂಡಿಲ್ಲ, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿ ನೇಣು ಹಾಕಿರುವುದಾಗಿ ಆಕೆಯ ಪೋಷಕರು ಆರೋಪಿಸಿ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ವಿಷಯ ತಿಳಿದು ತಹಶೀಲ್ದಾರ್ ಗಿರೀಶ್ ಶವಾಗಾರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

error: Content is protected !!