ಮರಾಠ ಸಮಾಜದ ಗ್ರಾ.ಪಂ. ಸದಸ್ಯರಿಗೆ ಅಭಿನಂದನೆ

ದಾವಣಗೆರೆ, ಫೆ.7- ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಚುನಾಯಿತರಾದ ಮರಾಠ ಸಮುದಾಯದ ನೂತನ ಸದಸ್ಯರುಗಳನ್ನು ಸನ್ಮಾನಿಸಿ ಗೌರವಿಸುವ ಮುಖೇನ ಅಭಿನಂದನೆ ಸಲ್ಲಿಸಲಾಯಿತು.

 ನಗರದ ದೇವರಾಜ ಅರಸು ಬಡಾವಣೆ ಬಿ ಬ್ಲಾಕ್ ನ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿಗಳ ಮರಾಠ ಸಮಾಜದ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು.

ಬೆಂಗಳೂರಿನ ಶ್ರೀ ಗೋಸಾಯಿ ಮಠ ಮಹಾಸಂಸ್ಥಾನದ ಭವಾನಿ ಪೀಠದ ಶ್ರೀ ಮಂಜು ನಾಥ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿ ಸಿದರು. ಪರಿಷತ್  ಜಿಲ್ಲಾಧ್ಯಕ್ಷ ಜಿ.ಹೆಚ್. ಮರಿಯೋಜಿರಾವ್ ಗಡದೆ ಅಧ್ಯಕ್ಷತೆ ವಹಿಸಿದ್ದರು. 

ಮರಾಠ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ. ಮಾಲತೇಶ್ ರಾವ್ ಜಾಧವ್, ಗೌರವಾಧ್ಯಕ್ಷ ಯಶವಂತರಾವ್ ಜಾಧವ್, ಪರಿಷತ್ ನ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಶ್ರೀಮತಿ ನಳಿನ ನರೇಂದ್ರ ರಾವ್ ಪವಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ ಶಿವಕುಮಾರ್, ಸಂಘಟನಾ ಕಾರ್ಯದರ್ಶಿ ಎನ್.ಎಸ್. ಕೃಷ್ಣರಾವ್ ಸಾವಂತ್, ರಾಘವೇಂದ್ರ, ಹನುಮಂತರಾವ್‌, ಪ್ರಶಾಂತ್‌ ಭೋಂಸ್ಲೆ, ಗಣೇಶ್‌ ಸುರ್ವೆ, ಸತೀಶ್‌ ಪವಾರ್‌, ಮೊಹರೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!