ಕೊರೊನಾ ಸೋಂಕು ತೀವ್ರವಾದರೆ ಮಾತ್ರ ಆಸ್ಪತ್ರೆಗೆ ದಾಖಲು

ಲಘು ಲಕ್ಷಣಗಳು, ಲಕ್ಷಣ ರಹಿತರಿಗೆ ತಾತ್ಕಾಲಿಕ ಆಸ್ಪತ್ರೆ

ಬೆಂಗಳೂರು, ಏ. 16- ಹೆಚ್ಚು ರೋಗ ಲಕ್ಷಣ ಇರುವವರು ಮತ್ತು ತೀವ್ರವಾಗಿ ಬಳಲುತ್ತಿರುವ ಕೋವಿಡ್ ರೋಗಿಗಳನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕು ಹೆಚ್ಚಿರುವ ನಗರ ಪಟ್ಟಣಗಳಲ್ಲಿ ಮತ್ತೆ ಕರ್ಫ್ಯೂ ಮುಂದು ವರೆಸುತ್ತೇವೆ. ಇದೇ 20 ರಂದು ಕೆಲವು ಕಠಿಣ  ನಿರ್ಣಯಗಳನ್ನು ಕೈಗೊಳ್ಳುವುದಾಗಿ ತಿಳಿಸಿ ದ್ದಾರೆ.  ಕಾರ್ಪೊರೇಟ್ ವಲಯದ ಆಸ್ಪತ್ರೆ ಗಳು ತಮ್ಮ ಹತ್ತಿರದ ಹೋಟೆಲ್‌ಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಕಡಿಮೆ ರೋಗ ಲಕ್ಷಣಗಳುಳ್ಳ ರೋಗಿಗಳಿಗೆ ನೋಡಿಕೊಳ್ಳಲು ತಾತ್ಕಾಲಿಕ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ವಹಿಸುವುದು. ಹೆಚ್ಚು ರೋಗ ಲಕ್ಷಣಗಳುಳ್ಳ ಅಗತ್ಯವಿರುವ ರೋಗಿಗಳನ್ನು ಮಾತ್ರ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲು ಕ್ರಮ ವಹಿಸುವುದು.  ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಸರ್ಕಾರದಿಂದ ದಾಖಲಿಸುವ ರೋಗಿಗಳಿಗೆ ಕಾಯ್ದಿರಿಸಲು ಕೂಡಲೇ ಕ್ರಮ ಕೈಗೊಳ್ಳುವುದು ಎಂದರು.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 5,000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು. 

ಅಗತ್ಯವಿರುವ ರೋಗಿಗಳಿಗೆ ಕೂಡಲೇ ಚಿಕಿತ್ಸೆ ನೀಡಲು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಓರ್ವ ಐ.ಪಿ.ಎಸ್. ಮತ್ತು ಐ.ಎ.ಎಸ್. ಅಧಿಕಾರಿಗಳನ್ನು ಹಾಗೂ ಬಿ.ಡಬ್ಲ್ಯೂ.ಎಸ್.ಎಸ್.ಬಿ., ಬೆಸ್ಕಾಂ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸುವುದು.  

ಕೊರೊನಾ ವೈರಸ್‌ನಿಂದ ತೀವ್ರತರವಾಗಿ ಬಳಲುತ್ತಿರುವ ರೋಗಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು. ಉಳಿದಂತೆ ಕೊರೊನಾ ಲಕ್ಷಣಗಳಿಲ್ಲದ  ರೋಗಿಗಳಿಗೂ  ತಾತ್ಕಾಲಿಕ ಚಿಕಿತ್ಸಾ  ಕೇಂದ್ರಗಳಲ್ಲಿ ಚಿಕಿತ್ಸೆ ನೀಡುವುದು ಹಾಗೂ  ಅಗತ್ಯವಿರುವಷ್ಟು ದಿನಗಳು ಮಾತ್ರ  ರೋಗಿಗಳನ್ನು  ಆಸ್ಪತ್ರೆಗಳಲ್ಲಿ  ಚಿಕಿತ್ಸೆ ನೀಡಿ  ಗುಣಮುಖರಾದ ಕೂಡಲೇ  ಆಸ್ಪತ್ರೆಯಿಂದ  ಬಿಡುಗಡೆಗೊಳಿಸುವುದು.

ರಾಜ್ಯದಲ್ಲಿ ಸದ್ಯಕ್ಕೆ ರೆಮ್ಡಿಸಿವಿಆರ್‌ ಕೊರತೆ ಇರುವುದಿಲ್ಲ.  ಆದರೂ ಹೆಚ್ಚುವರಿ ಡೋಸ್‌ಗಳನ್ನು ಖರೀದಿ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದನ್ನು ಅಂತಿಮಗೊಳಿಸಿ ಹೆಚ್ಚುವರಿ ಡೋಸ್‌ಗಳನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳುವುದು. 

ಪ್ರಸಕ್ತ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ.  ಆದಾಗ್ಯೂ 5,000 ಆಕ್ಸಿಜನ್ ಸಿಲಿಂಡರ್‌ಗಳ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದು. ಪದೇ ಪದೇ ಆಕ್ಸಿಜನ್ ಸಿಲಿಂಡರ್‌ಗಳ ಬದಲಾವಣೆ ತಪ್ಪಿಸಲು ಜಂಬೋ ಸಿಲಿಂಡರ್‌ಗಳನ್ನು ಖರೀದಿಸಲು ಕೂಡಲೇ ಕ್ರಮ ಕೈಗೊಳ್ಳುವುದು. 

ಈಗಾಗಲೇ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿದ್ದು, ಅದೇ ರೀತಿಯಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಟೆಂಡರ್ ಕರೆದಿದ್ದು, ಕೂಡಲೇ ಅದನ್ನು ಅಂತಿಮಗೊಳಿಸಿ ಘಟಕ ಸ್ಥಾಪಿಸಲು ತ್ವರಿತ ಕ್ರಮ ಕೈಗೊಳ್ಳುವುದು.

ಮುಂಚೂಣಿ ಆರೋಗ್ಯ  ಸಿಬ್ಬಂದಿಯಾದ ವೈದ್ಯರು, ನರ್ಸ್‌ಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಕೂಡಲೇ ಕ್ರಮ ಕೈಗೊಳ್ಳುವುದು. ರಾಜ್ಯಾದ್ಯಂತ ಸಂಪರ್ಕಿತರ  ಟ್ರೇಸಿಂಗ್ ಗಳನ್ನು ತ್ವರಿತಗೊಳಿಸುವುದು.  ಹೋಮ್ ಐಸೋಲೇಷನ್ ಇರುವ ರೋಗಿಗಳಿಗೆ ಮುದ್ರೆ ಹಾಕಲು ಕ್ರಮ ಕೈಗೊಳ್ಳುವುದು ಎಂದು ತಿಳಿಸಿದರು. 

ಪ್ರತಿದಿನ ನಡೆಸುವ ಕೋವಿಡ್ ಟೆಸ್ಟ್ ಫಲಿತಾಂಶವು 24 ಗಂಟೆಯೊಳಗಾಗಿ ತಪ್ಪದೇ ಲಭ್ಯವಾಗುವಂತೆ ಕ್ರಮ ವಹಿಸಲಾಗುವುದು ಮತ್ತು ಟೆಸ್ಟಿಂಗ್ ಅವಧಿಯನ್ನು ಇನ್ನೂ ಕಡಿಮೆಗೊಳಿಸಲು ಕೂಡಲೇ ಅಗತ್ಯ ಕ್ರಮ ವಹಿಸುವುದು.

ಕಂಟೈನ್ಮೆಂಟ್ ವಲಯಗಳು ಮತ್ತು ಮೈಕ್ರೋ ಕಂಟೈನ್ಮೆಂಟ್ ವಲಯಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು.  ಅನಗತ್ಯವಾಗಿ ಜನ ಗುಂಪು ಸೇರುವುದನ್ನು ತಡೆಗಟ್ಟಲು ಎಲ್ಲಾ ಕ್ರಮ ಕೈಗೊಳ್ಳಬೇಕೆಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

error: Content is protected !!