ಹರಿಹರದಲ್ಲಿ ಬಿಜೆಪಿ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

ಹರಿಹರ, ಫೆ.13- ನಗರದ ಶ್ರೀ ರಾಘವೇಂದ್ರ ಮಠ ದಲ್ಲಿ ಬಿಜೆಪಿ ಯುವ ಮೋರ್ಚಾ ಹರಿಹರ ನಗರ ಘಟಕದ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆಯು ನಡೆಯಿತು. ಪ್ರಥಮ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಅಧ್ಯಕ್ಷ ರವಿ ರಾಯ್ಕರ್ ವಹಿಸಿದ್ದರು.

ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕಾರಿಣಿ ಸಭೆಯ ಕೆಂದ್ರಬಿಂದುವಾಗಿದ್ದ ಮಾಜಿ ಶಾಸಕ ಬಿ.ಪಿ. ಹರೀಶ್ ಮಾತನಾಡಿ, ಯುವ ಮೋರ್ಚಾ ಬಿಜೆಪಿಯ ಪ್ರಬಲ ಶಕ್ತಿಯಾಗಿ ನಿಂತು ಪಕ್ಷದ ಸಂಘಟನೆ ಮಾಡಲಿ ಎಂದು ಕರೆ ನೀಡಿದರು. 

ನಂತರ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಆರ್.ಎಸ್. ಶಿವಪ್ರಕಾಶ್ ಮಾತನಾಡಿ, ಹರಿಹರದಲ್ಲಿ ಬಲಿಷ್ಠ ನಾಯಕತ್ವ ಹೊಂದಿರುವ ಹರೀಶ್ ಈ ಬಾರಿ ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಲು ಯುವ ಮೋರ್ಚಾ ಹೆಚ್ಚಿನ ಪರಿಶ್ರಮ ವಹಿಸಬೇಕಾಗಿದೆ ಎಂದರು.  ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್, ನಗರ ಯುವ ಮೋರ್ಚಾ ಅಧ್ಯಕ್ಷ ರವಿ ರಾಯ್ಕರ್ ಮಾತನಾಡಿದರು.

ದೂಡಾ ಸದಸ್ಯ ನಾಗರಾಜ ರೋಖಡೆ, ಮಾರುತಿ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ಶ್ರೀಧರ್, ನಗರ ಯುವ ಮೋರ್ಚಾ ಉಪಾಧ್ಯಕ್ಷ ಯು.ಹೆಚ್. ರಾಜು, ಬಿ. ಮಾರುತಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!