ಮಾಯಕೊಂಡ ಆಸ್ಪತ್ರೆಗೆ ಆಕ್ಸಿಜನ್ ಪ್ಲಾಂಟ್ ಮಂಜೂರಿಗೆ ಒತ್ತಾಯ

ದಾವಣಗೆರೆ, ಜು.6- ಮಾಯಕೊಂಡದ ಸರ್ಕಾರಿ ಆಸ್ಪತ್ರೆಗೆ ಮುಖ್ಯಮಂತ್ರಿ ಅವರ ನಿಧಿಯಿಂದ ಆಕ್ಸಿಜನ್ ಪ್ಲಾಂಟ್‌ ಅನ್ನು ಅಳವಡಿಸಿ ಕೊಡುವಂತೆ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮಾಯಕೊಂಡ ಪುರ ಅಭಿವೃದ್ಧಿ ಕ್ರಿಯಾಶೀಲ ವೇದಿಕೆ ಹಾಗೂ ಮಾಯಕೊಂಡ ತಾಲ್ಲೂಕು ಹೋರಾಟ ಸಮಿತಿ ಮನವಿ ಮಾಡಿದೆ.

ಕೊರೊನಾ ರೋಗ ನಿಯಂತ್ರಿಸಲು ಪ್ರತಿ ಶಾಸಕರಿಗೂ 2 ಕೋಟಿ ರೂ. ಹಣ ಮಂಜೂರು ಮಾಡಿದ್ದು, ಸದರಿ ನಿಧಿಯಿಂದ ಒಂದು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಆಕ್ಸಿಜನ್ ಪ್ಲಾಂಟ್‌ ಅಳವಡಿಸಿಕೊಡಲು ಮನವಿ ಮಾಡಿದ್ದಾರೆ. ಜೊತೆಗೆ ಆರೋಗ್ಯ ಸಚಿವರಲ್ಲಿ ಶಿಫಾರಸ್ಸು ಮಾಡಿ ಮಾಯಕೊಂಡ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ, 4 ಜನ ವೈದ್ಯರು ಹಾಗೂ ಹೆಚ್ಚಿನ ಸಿಬ್ಬಂದಿ ಯನ್ನು ನೇಮಕಾತಿ ಮಾಡಿಸಿ ಕೊಡಬೇಕಾಗಿ ವೇದಿಕೆ ಅಧ್ಯಕ್ಷ ಎಂ.ಎಸ್.ಕೆ. ಶಾಸ್ತ್ರಿ ಮನವಿ ಮಾಡಿದ್ದಾರೆ.

error: Content is protected !!