ವೀಣಾ ನಂಜಪ್ಪನವರ ನೇತೃತ್ವದಲ್ಲಿ 40ನೇ ವಾರ್ಡ್‌ನಲ್ಲಿ ಕೋವಿಡ್ ಲಸಿಕೆ

ದಾವಣಗೆರೆ, ಏ.18- ನಗರದ 40ನೇ ವಾರ್ಡಿನಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ನಡೆಯಿತು. ಬಿಜೆಪಿ ಮುಖಂಡ, ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಿರ್ದೇಶಕ ತ್ಯಾವಣಿಗಿ ವೀರಭದ್ರಸ್ವಾಮಿ ಅವರಿಗೆ ಲಸಿಕೆ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಡಾ. ಎಸ್.ಎ. ರವೀಂದ್ರನಾಥ್, ಮಾಜಿ ಮುಖ್ಯ ಸಚೇತಕ ಎ.ಹೆಚ್. ಶಿವಯೋಗಿ ಸ್ವಾಮಿ, ಈ ಭಾಗದ ಪಾಲಿಕೆ ಸದಸ್ಯರಾದ ವೀಣಾ ನಂಜಪ್ಪ, ನಾಮನಿರ್ದೇಶಿತ ಸದಸ್ಯ ಎಸ್.ಬಿ. ರುದ್ರಗೌಡ, ಅರುಣ್ ನಂಜಪ್ಪ, ಬಿಜೆಪಿ ಮುಖಂಡರಾದ ಹೇಮಂತ್ ಕುಮಾರ್, ಡಿ.ಎಸ್. ಶಿವಶಂಕರ್, ಲಿಂಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ನಾಗರಾಜ್, ಪಾಲಿಕೆಯ ಮೇಯರ್ ಎಸ್.ಟಿ. ವೀರೇಶ್, ನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ವಿವೇಕಾನಂದ ಬಡಾವಣೆಯ ಹಿತರಕ್ಷಣಾ ಸಮಿತಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

error: Content is protected !!