ಹೊಸಳ್ಳಿಯಲ್ಲಿ ಗ್ರಾಮಾಂತರ ಕ್ರಿಕೆಟ್ ಕ್ರೀಡಾಕೂಟದ ಸಮಾರೋಪ ಸಮಾರಂಭ

ದಾವಣಗೆರೆ, ಏ.18 –  ಹೊಸಳ್ಳಿ ಗ್ರಾಮದಲ್ಲಿ ಗ್ರಾಮಾಂತರ ಕ್ರಿಕೆಟ್ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ಭಾರತೀಯ ಜೀವ ವಿಮಾ ನಿಗಮದ ಹರಿಹರ ಶಾಖೆಯ ಸಹಾಯಕ ಆಡಳಿತ ಅಧಿಕಾರಿ ಚಂದ್ರಶೇಖರ ನಾಯ್ಕ್ ವಹಿಸಿದ್ದರು. ಗ್ರಾ.ಪಂ ಸದಸ್ಯ ಕುಮಾರ ನಾಯ್ಕ್ ಮತ್ತು ಕೇಂದ್ರೀಯ ಮೀಸಲು ಪಡೆ ಆರಕ್ಷಕ ನಾಗರಾಜ್ ನಾಯ್ಕ್  ಮತ್ತಿತರರು ಭಾಗವಹಿಸಿದ್ದರು.

error: Content is protected !!