ಜನತೆಯನ್ನು ಸಂಕಷ್ಟಕ್ಕೆ ದೂಡಿ ಲಾಭ ಪಡೆಯುತ್ತಿರುವ ಸರ್ಕಾರ

ದಾವಣಗೆರೆ, ಜು.9- ಇಂಧನಗಳು ಮತ್ತು ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಅಖಿಲ ಭಾರತ ಯುವಜನ ಫೆಡರೇಷನ್ ಜಿಲ್ಲಾ ಸಮಿತಿಯಿಂದ ನಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. 

ನಂತರ ಬೆಲೆ ಇಳಿಕೆಗೆ ಆಗ್ರಹಿಸಿ ಉಪವಿಭಾಗಾಧಿಕಾರಿ ಮುಖಾಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.

ಸಾರಿಗೆ ಪ್ರಯಾಣ ದರ ಮತ್ತು ಅಗತ್ಯ ವಸ್ತುಗಳು ಸರಬರಾಜು ವಾಹನ ದರ ಹೆಚ್ಚಳವಾಗಿದೆ. ಅಗತ್ಯ ವಸ್ತುಗಳು ಗಗನಕ್ಕೆ ಏರಿಕೆಯಾಗಿವೆ. ತೈಲ ದರ ನಿರಂತರ ಹೆಚ್ಚಳದಿಂದ ಕಂಗಾಲಾಗಿರುವ ಜನತೆಗೆ ಗಾಯಾದ ಮೇಲೆ ಬರೆ ಇಟ್ಟಂತಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಉಜ್ಜಲ ಯೋಜನೆಯ ಫಲಾನುಭವಿಗಳಿಗೆ ಪೂರೈಸುವ ಎಲ್.ಪಿ.ಜಿ. ಸಿಲಿಂಡರ್‌ಗೂ ಈ ದರ ಹೆಚ್ಚಳ ಅನ್ವಯವಾಗುತ್ತದೆ. ಕಳೆದ ಮೂರು ತಿಂಗಳಲ್ಲಿ ಎಲ್.ಪಿ.ಜಿ. ಸಿಲಿಂಡರ್ ದರದಲ್ಲಿ 200 ರೂ. ಹೆಚ್ಚಳವಾಗಿದೆ. ಜನತೆಯನ್ನು ಸಂಕಷ್ಟಕ್ಕೆ ದೂಡಿ ಕೇಂದ್ರ ಸರ್ಕಾರ ಲಾಭ ಮಾಡಿಕೊಳ್ಳುತ್ತಿದೆ ಎಂದು ಎಐವೈಎಫ್ ರಾಜ್ಯ ಉಪಾಧ್ಯಕ್ಷ ಆವರಗೆರೆ ವಾಸು ಆಕ್ಷೇಪಿಸಿದರು.

ನಿರುದ್ಯೋಗಿ ಯುವಕರಿಗೆ ಭಗತ್ ಸಿಂಗ್ ನ್ಯಾಷನಲ್ ಎಂಪ್ಲಾಯ್‌ಮೆಂಟ್ ಗ್ಯಾರಂಟಿ ಆಕ್ಟ್ ಜಾರಿಗೊಳಿಸಬೇಕೆಂದು  ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆರನಹಳ್ಳಿ ರಾಜು, ಜಿಲ್ಲಾ ಉಪಾಧ್ಯಕ್ಷರಾದ ಫಜಲುಲ್ಲ, ಇರ್ಫಾನ್, ಹೆಚ್.ಎಂ. ಮಂಜುನಾಥ್, ಮಂಜುನಾಥ ದೊಡ್ಡಮನೆ, ಮಂಜುನಾಥ ಹರಳಯ್ಯನಗರ, ರುದ್ರೇಶ್ ಮಳಲಕೆರೆ, ಅಂಜಿನಪ್ಪ ಮಳಲಕೆರೆ, ಮಂಜುನಾಥ ಮಳಲಕೆರೆ, ಗದ್ದಿಗೇಶ್ ಪಾಳೇದ್, ಎ. ರಂಗಸ್ವಾಮಿ, ಮಂಜುನಾಥ ಪಿಗ್ನಿ, ಪರಶುರಾಮ ಹೆಚ್. ಗುದ್ದಾಳ್, ಹನುಮಂತಪ್ಪ ಹಾಲೇಕಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

error: Content is protected !!