ವಿದ್ಯಾಸಿರಿ : ಅರ್ಜಿ ಅವಧಿ ವಿಸ್ತರಣೆ

ದಾವಣಗೆರೆ, ಏ.19- 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.

ಮಾಹಿತಿಗೆ ವೆಬ್‍ಸೈಟ್ www.ssp.postmatric.karnataka.gov.in, ದೂರವಾಣಿ ಸಂಖ್ಯೆ 8050770005 / 80507 70004 ಕ್ಕೆ ಸಂಪರ್ಕಿಸಬಹುದು.

error: Content is protected !!