ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ದಾವಣಗೆರೆ, ಜು.9- ಇಂಧನಗಳ ಬೆಲೆ ಸೇರಿದಂತೆ ಎಲ್‍ಪಿಜಿ ಸಿಲಿಂಡರ್, ಅಡುಗೆ ಎಣ್ಣೆ ಹಾಗೂ ವಿದ್ಯುತ್ ದರ ಏರಿಕೆ ವಿರೋಧಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಜಿಲ್ಲಾ ಸಂಘಟನಾ ಸಮಿತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್‌ಯುಸಿಐ ರಾಜ್ಯ ಸಮಿತಿ ಸದಸ್ಯ ಡಾ. ಸುನಿತ್ ಕುಮಾರ್ ಮಾತನಾಡಿ, ಶ್ರೀಸಾಮಾನ್ಯರ ಬೆನ್ನಿಗೆ ನಿಲ್ಲಬೇಕಾಗಿದ್ದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬೆಲೆ ಏರಿಕೆ ಮಾಡುವ ಮೂಲಕ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕೈದಾಳೆ ಮಾತನಾಡಿ, ನಮ್ಮನ್ನಾಳುವ ಸರ್ಕಾರಗಳು ಜನಸಾಮಾನ್ಯರನ್ನು ಸಂಪೂರ್ಣವಾಗಿ ಕಡೆಗಣಿಸಿ, ಸಿರಿವಂತರ ಸೇವೆಗಾಗಿ ಕಂಕಣತೊಟ್ಟಿವೆ ಎಂದು ಖಂಡಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕೈದಾಳೆ, ರಾಜ್ಯ ಸಮಿತಿ ಸದಸ್ಯ ಸುನೀತ್ ಕುಮಾರ್, ಮಂಜುನಾಥ ಕುಕ್ಕುವಾಡ, ತಿಪ್ಪೇಸ್ವಾಮಿ ಅಣಬೇರು, ಮಧು ತೊಗಲೇರಿ, ಭಾರತಿ, ನಾಗಜ್ಯೋತಿ, ಪೂಜಾ, ಪರಶುರಾಮ್, ಕಾವ್ಯ, ನಾಗಸ್ಮಿತ, ಗುರು, ಮಮತ, ಪುಷ್ಪ ಸೇರಿದಂತೆ ಇತರರು ಭಾಗವಹಿಸಿದ್ದರು. 

error: Content is protected !!