ಇಂದು ಶ್ರೀ ಅನ್ನಪೂರ್ಣೇಶ್ವರಿ ದೇವಿಯ ರಥೋತ್ಸವ

ದಾವಣಗೆರೆ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್‌ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ರಥೋತ್ಸವವು ಇಂದು ಬೆಳಿಗ್ಗೆ 11.30 ಗಂಟೆಗೆ ನಡೆಯುವುದು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಶ್ರೀ ಮಹಾಗಣಪತಿ ಪೂಜಾ, ರಥಸಪ್ತಮಿ ಪ್ರಯುಕ್ತ ಶ್ರೀ ಸೂರ್ಯನಾರಾಯಣ ಪೂಜೆ, ಶ್ರೀಮಾತಾ ಅನ್ನಪೂರ್ಣೇಶ್ವರಿ ರಥೋತ್ಸವ ಪ್ರಯುುಕ್ತ ಹೋಮಾದಿಗಳು, ರಥಕ್ಕೆ ಕುಂಭಾಭಿಷೇಕ, ಬಲಪ್ರದಾನ, ರಥಾಲಂಕಾರ, ಶ್ರೀಮಾತಾ ಅನ್ನಪೂರ್ಣೇಶ್ವರಿ ಅಮ್ಮನವರ ಚರಮೂರ್ತಿಯೊಂದಿಗೆ ರಥೋತ್ಸವ, ಮಹಾದ್ವಾರ ಪ್ರದಕ್ಷಿಣೆ, ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯುವುದು.

ಶಾಸಕ ಡಾ. ಶ್ರೀ ಶಾಮನೂರು ಶಿವಶಂಕರಪ್ಪ ಮತ್ತು ಕುಟುಂಬದ ವರು, ಶಾಸಕ ಎಸ್‌.ಎ ರವೀಂದ್ರನಾಥ್‌, ಸಂಸದ ಜಿ.ಎಂ. ಸಿದ್ದೇಶ್ವರ ಮತ್ತು ಇತರೆ ಗಣ್ಯರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಆರ್.ಜಿ.ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ.

error: Content is protected !!