ಕೊರೊನಾ ನಿಯಮ ಉಲ್ಲಂಘಿಸಿದ ಆಟೋ ಚಾಲಕನ ವಶ

ದಾವಣಗೆರೆ, ಏ.22- ಕೊರೊನಾ ನಿಯಮ ಉಲ್ಲಂಘಿಸಿ, ಹೆಚ್ಚುವರಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಪ್ರಯಾಣಿಕರ ಆಟೋ ಮೇಲೆ ಚನ್ನಗಿರಿ ಪೊಲೀಸ್ ಠಾಣೆ ಪಿಎಸ್ಐ ಜಿ. ಜಗದೀಶ್ ಮತ್ತು ಸಿಬ್ಬಂದಿಗಳ ತಂಡ ಇಂದು ದಾಳಿ ನಡೆಸಿ ಆಟೋ ಚಾಲಕನನ್ನು ವಶಕ್ಕೆ ಪಡೆದು ಈತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದ ಆರ್. ಪ್ರಭು ಎಂಬ ಆಟೋ ಚಾಲಕನು ಚನ್ನಗಿರಿ ಟೌನ್ ಕಗತೂರು ರಸ್ತೆಯಲ್ಲಿ ಆಟೋದಲ್ಲಿ 8-9 ಜನ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತಿದ್ದ. ಈ ವೇಳೆ ದಾಳಿ ನಡೆಸಿದಾಗ, ಆಟೋದಲ್ಲಿದ್ದ ಪ್ರಯಾಣಿಕರು ಆಟೋದಿಂದ ಇಳಿದು ಓಡಿ ಹೋಗಿದ್ದಾರೆ. ಹೆಚ್ಚಿನ ಜನರನ್ನು ತನ್ನ ಆಟೋದಲ್ಲಿ ಕೂರಿಸಿಕೊಂಡು ಚಾಲನೆ ಮಾಡಿದ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

error: Content is protected !!