ಹರಿಹರದ ಗಾಂಧೀ ಮೈದಾನಕ್ಕೆ ಸ್ಥಳಾಂತರವಾದ ತರಕಾರಿ ಮಾರುಕಟ್ಟೆ

ಹರಿಹರ, ಏ.23- ದಿನೇ ದಿನೇ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಿನ ನಿತ್ಯ ನಡೆಸುತ್ತಿದ್ದ ತರಕಾರಿ ಮಾರುಕಟ್ಟೆಯನ್ನು ಬಂದ್ ಮಾಡಿ, ಗಾಂಧಿ ಮೈದಾನದಲ್ಲಿ ತರಕಾರಿ ಮಾರಾಟಕ್ಕೆ ನಗರಸಭೆ ವತಿಯಿಂದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪೌರಾಯುಕ್ತೆ ಎಸ್. ಲಕ್ಷ್ಮಿ ತಿಳಿಸಿದರು.

ನಗರದ ಗಾಂಧಿ ಮೈದಾನದಲ್ಲಿ ಅವರು ಪತ್ರಕರ್ತರ ಜೊತೆಗೆ ಮಾತನಾಡುತ್ತಾ, ಹೂವು, ಹಣ್ಣು ಮಾರಾಟಕ್ಕೆ ಗ್ರಂಥಾಲಯ ಮುಂಭಾಗದ ಸ್ಥಳದಲ್ಲಿ ವ್ಯವಸ್ಥೆ ಮಾಡಲಾಗಿದೆ. 

ಗಾಂಧಿ ಮೈದಾನದಲ್ಲಿ ಸಾರ್ವಜನಿಕರು ಅಂತರ ಕಾಪಾಡಿಕೊಂಡು ವ್ಯವಹಾರ ಮಾಡುವು ದಕ್ಕೆ ಬಣ್ಣದ ಮಾರ್ಕ್‌ಗಳನ್ನು ಹಾಕಲಾಗಿದೆ. ಇದನ್ನು ಪಾಲಿಸಬೇಕು. ನಾಳೆ ಶನಿವಾರ ಮತ್ತು ಭಾನುವಾರ ನಗರದಲ್ಲಿ ಔಷಧಿ ಅಂಗಡಿಯನ್ನು ಹೊರತುಪಡಿಸಿ ಯಾವುದೇ ಅಂಗಡಿ ಮುಂಗಟ್ಟನ್ನು ತೆರೆದು ವ್ಯಾಪಾರ ವಹಿವಾಟು ನಡೆಸುವುದಕ್ಕೆ ಅವಕಾಶ ಇರುವುದಿಲ್ಲ. ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಎಇಇ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ್, ಕಿರಣ್ ಕುಮಾರ್, ತಿಪ್ಪೇಸ್ವಾಮಿ, ಕರೂರು ಮಂಜುನಾಥ್, ಪ್ರಕಾಶ್, ಪ್ರವೀಣ್, ರಾಜು ಬಣಕಾರ್, ತಿಮ್ಮಪ್ಪ, ತಿಮ್ಮಯ್ಯ ಇತರರು ಹಾಜರಿದ್ದರು.  

error: Content is protected !!