ಜಿಲ್ಲೆಯ ಉಪನೋಂದಣಾಧಿಕಾರಿಗಳ ಕಚೇರಿಯನ್ನು ಎರಡು ಭಾಗಗಳನ್ನಾಗಿ ವಿಂಗಡಿಸಲು ಒತ್ತಾಯ

ಜಿಲ್ಲೆಯ ಉಪನೋಂದಣಾಧಿಕಾರಿಗಳ ಕಚೇರಿಯನ್ನು ಎರಡು ಭಾಗಗಳನ್ನಾಗಿ ವಿಂಗಡಿಸಲು ಒತ್ತಾಯ - Janathavaniಸರ್ಕಾರಕ್ಕೆ ಕೋಟ್ಯಾಂತರ ರೂ.ಗಳ ಆದಾಯ ತಂದು ಕೊಡುವ ಇಲಾಖೆಯನ್ನು ಸುಸಜ್ಜಿತವಾಗಿಸಬೇಕಿದೆ.

– ಬಿ. ವೀರಣ್ಣ, ಮಾಜಿ ಅಧ್ಯಕ್ಷರು, ನಗರಸಭೆ, ದಾವಣಗೆರೆ.

ದಾವಣಗೆರೆ, ಜು. 15- ಸುಸಜ್ಜಿತ ಸೌಲಭ್ಯ ಗಳಿಲ್ಲದೆ ಸಾರ್ವಜನಿಕರಿಗೆ ಪ್ರತಿನಿತ್ಯ ತೊಂದರೆ ಯಾಗುತ್ತಿರುವ ಜಿಲ್ಲಾ ಉಪನೊಂದಣಾಧಿಕಾರಿಗಳ ಕಛೇರಿಯನ್ನು ದಾವಣಗೆರೆ ಉತ್ತರ ಮತ್ತು ದಾವಣಗೆರೆ ದಕ್ಷಿಣ ವಿಭಾಗ ಎಂದು ಎರಡು ಭಾಗಗಳನ್ನಾಗಿ ವಿಂಗಡಿಸುವಂತೆ ನಗರಸಭೆ ಮಾಜಿ ಅಧ್ಯಕ್ಷ ಬಿ. ವೀರಣ್ಣ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಗರದ ಪಿ.ಬಿ. ರಸ್ತೆಯಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಗೆ ಹೋಗಲು ಸರಿಯಾದ ರಸ್ತೆ, ವಾಹನ ನಿಲುಗಡೆ, ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ, ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ವಯೋವೃದ್ಧರು, ಅಂಗವಿಕಲರು ಈ ಕಚೇರಿಗೆ ಬರಲು ಸಾಕಷ್ಟು ತೊಂದರೆಯಾಗುತ್ತಿದೆ. ಸರ್ಕಾರಕ್ಕೆ ಕೋಟ್ಯಾಂತರ ರೂ. ಆದಾಯ ಬರುವ ಇಲಾಖೆಗೆ ದಿನನಿತ್ಯ ಸಾವಿರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಾರೆ. ಬಂದಂತಹವರಿಗೆ ಸರಿಯಾದ ವ್ಯವಸ್ಥೆ ಗಳಿಲ್ಲ. ಈಗಿರುವ ಕಚೇರಿ ಬಹಳ ಚಿಕ್ಕದಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ.  ಅಲ್ಲದೇ, ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ಕಂಪ್ಯೂಟರ್‍ಗಳು ಕೂಡ ತುಂಬಾ ಹಳೆಯ ದಾಗಿವೆ. ಆದ್ದರಿಂದ ಸ್ಮಾರ್ಟ್ ಸಿಟಿಯಲ್ಲಿ ಸುಸಜ್ಜಿತ ಎರಡು ಉಪನೋಂದಣಾಧಿಕಾರಿ ಗಳವರ ಕಚೇರಿ ಗಳು ಬೇಕಾಗಿವೆ. ಈ ಕಚೇರಿಗೆ ಜಿಲ್ಲೆ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾರ್ವಜನಿಕರು ಪ್ರತಿನಿತ್ಯ ಬರುತ್ತಾರೆ.

ಜಿಲ್ಲೆಯ ಉಪನೋಂದಣಾಧಿಕಾರಿಗಳ ಕಚೇರಿಯನ್ನು ಎರಡು ಭಾಗಗಳನ್ನಾಗಿ ವಿಂಗಡಿಸಲು ಒತ್ತಾಯ - Janathavani

ಆದ್ದರಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಉತ್ತರ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೊಂದು ಕಚೇರಿ ಪ್ರಾರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸರ್ಕಾರ, ಜಿಲ್ಲಾಡಳಿತ ಕೂಡಲೇ  ಗಮನಹರಿಸಿ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕಾಗಿದೆ.  

ದೇಶಾದ್ಯಂತ ಕೊರೊನಾ ಮಹಾಮಾರಿ ಇರುವುದರಿಂದ ಸಬ್‍ರಿಜಿಸ್ಟ್ರಾರ್ ಕಚೇರಿಗೆ ಬರುವ ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸ್ಥಳಾವಕಾಶವಿಲ್ಲ. ಇದರಿಂದ  ಈ ಕಚೇರಿಗೆ ಸಾರ್ವಜನಿಕರು ಬರಲು ಹಿಂದೇಟು ಹಾಕುವಂತಾಗಿದೆ ಎಂದು ವೀರಣ್ಣ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

error: Content is protected !!