ದೇವಸ್ಥಾನ ಧ್ವಂಸ ಪ್ರಕರಣ: ಕಾನೂನು ಕ್ರಮಕ್ಕೆ ಒತ್ತಾಯ

ಚನ್ನಗಿರಿ, ಫೆ.26- ತಾಲ್ಲೂಕಿನ ಅರೇಹಳ್ಳಿಯಲ್ಲಿ ಇತ್ತೀಚೆಗಷ್ಟೇ ಕಿಡಿಗೇಡಿಗಳು ಧ್ವಂಸ ಮಾಡಿದ್ದ ಶ್ರೀ ಸಂತ ಸೇವಾಲಾಲ್ ದೇವಸ್ಥಾನವನ್ನು ಪುನರ್ ನಿರ್ಮಾಣ ಮಾಡಿಕೊಡುವಂತೆ ಮತ್ತು ಬಂಜಾರ ಸಮುದಾಯದವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ, ಕರುನಾಡು ಹಿತರಕ್ಷಣಾ ಸಮಿತಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

35 ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನವನ್ನು ಕಳೆದ ಫೆ.16 ರಂದು ಕಿಡಿಗೇಡಿಗಳು ಧ್ವಂಸ ಮಾಡಿ, ಬಂಜಾರ ಸಮುದಾಯದವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಮೇಲೆ ದೂರು ನೀಡಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕೂಡಲೇ ಅವರನ್ನು ಬಂಧಿಸಿ, ಅದೇ ಸ್ಥಳದಲ್ಲಿಯೇ ದೇವಸ್ಥಾನ ಮರು ಸ್ಥಾಪಿಸದಿದಲ್ಲಿ ಹೋರಾಟ ನಡೆಸಬೇಕಾಗುತ್ತದೆಂದು ಸಂಘದ ಸದಸ್ಯರು ಎಚ್ಚರಿಸಿದ್ದಾರೆ.

error: Content is protected !!