ಹರಪನಹಳ್ಳಿಯಲ್ಲಿ ಪಂಚಕರ್ಮ ಚಿಕಿತ್ಸೆ ಮರು ಆರಂಭ

ಹರಪನಹಳ್ಳಿ, ಮಾ.3- ಸ್ಥಳೀಯ ಸಾರ್ವಜನಿಕ ಆಯುರ್ವೇದ ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಯನ್ನು ಮರು ಆರಂಭಿಸಲಾಗಿದೆ ಎಂದುಡಾ. ಗೀತಾ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ  ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಚಿಕಿತ್ಸೆಯನ್ನು ಇದೀಗ ಆರಂಭಿಸಲಾಗಿದ್ದು, ಪಂಚಕರ್ಮ ಚಿಕಿತ್ಸೆಗೆ ಯಾವುದೇ ಶುಲ್ಕ ಇರುವುದಿಲ್ಲ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವೈದ್ಯರುಗಳಾದ ಸವಿತಾ, ಶಿವಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

 

error: Content is protected !!