ಜಗಳೂರು : ಜೆಡಿಎಸ್ ಮುಖಂಡ ಸಿ. ದೇವೇಂದ್ರಪ್ಪ ಕಾಂಗ್ರೆಸ್ ಸೇರ್ಪಡೆ

ಜಗಳೂರು, ಮಾ.7- ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ   ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಜೆಡಿಎಸ್ ಮುಖಂಡ ಸಿ. ದೇವೇಂದ್ರಪ್ಪ ಕಾಂಗ್ರೆಸ್‌ಗೆ  ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ  ಷಂಷೀರ್ ಅಹಮದ್ ಅವರಿಗೆ  ಮನವಿ ಸಲ್ಲಿಸಿದ ನಂತರ ಮಾತನಾಡಿ, ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಸೇರುವ ನಿರ್ಧಾರ ಮಾಡಿದ್ದೇನೆ. ತಳಮಟ್ಟದಿಂದಲೂ ಪಕ್ಷ ಸಂಘಟನೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ  ಎಂದು ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ  ತಿಳಿಸಿದರು. 

  ಈ ಸಂದರ್ಭದಲ್ಲಿ  ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಷಂಷೀರ್ ಅಹಮದ್, ಕಾಂಗ್ರೆಸ್ ಎಸ್ಸಿ ಘಟಕದ  ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಮುಖಂಡರಾದ  ಎನ್. ಓಮಣ್ಣ,  ಕಾಟಪ್ಪ, ಗಿಡ್ಡನಕಟ್ಟೆ ತಿಪ್ಪೇಸ್ವಾಮಿ, ಗುರುಸಿದ್ದಗೌಡ, ಮಡ್ರಳ್ಳಿ ಗಿರೀಶ್, ನಾಗರಾಜ್ ಸೇರಿದಂತೆ ಮತ್ತಿತರರಿದ್ದರು. 

error: Content is protected !!