ದಾವಣಗೆರೆ, ಮೇ 6- ಮೇ 5 ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಾಗಿದ್ದು, ತಾಲ್ಲೂಕು ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಸಮಸ್ತ ಕನ್ನಡಿಗರಿಗೆ ಶುಭ ಕೋರಿದ್ದಾರೆ. ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಅವರಿಂದ 5.5.1915 ರಲ್ಲಿ ಸ್ಥಾಪಿತವಾಗಿದ್ದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕಸಾಪ ಇಂದು 107ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಆಚರಿಸಿಕೊ ಳ್ಳುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಆಚರಣೆ ಮಾಡುವ ಸುಸ್ಥಿತಿಯಲ್ಲಿಲ್ಲದ ಕಾರಣ ನಮ್ಮ ಮನೆ-ಮನಗಳಲ್ಲಿಯೇ §ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ¬ ಧ್ಯೇಯ ವಾಕ್ಯದೊಂದಿಗೆ ಪರಿಷತ್ತಿನ ಉದ್ದೇಶಗಳನ್ನು ಈಡೇರಿಸಲು ಕಂಕಣಬದ್ಧರಾಗೋಣ ಎಂದು ವಾಮದೇವಪ್ಪ ಕರೆ ನೀಡಿದ್ದಾರೆ.
July 24, 2024