ತಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಶ್ರೀದೇವಿ ಮಂಜಪ್ಪ ರಾಜೀನಾಮೆ

ಹರಿಹರ, ಮಾ.9- ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸ್ಥನಾಕ್ಕೆ ಎಚ್.ಎಸ್. ಶ್ರೀದೇವಿ ಮಂಜಪ್ಪ ರಾಜೀನಾಮೆ ನೀಡಿದ್ದಾರೆ.

ನಾಲ್ಕು ವರ್ಷ ಒಂಭತ್ತು ತಿಂಗಳು ಅಧ್ಯಕ್ಷರಾಗಿ ಶ್ರೀದೇವಿ ಅವರು ಕಾರ್ಯ ನಿರ್ವಹಿಸಿದ್ದು, ಉಳಿದ ಮೂರು ತಿಂಗಳ ಅವಧಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಫೆ. 22 ರಂದು ನೀಡಿದ್ದಾರೆ. 

ಪಂಚಾಯತ್ ರಾಜ್ ಅಧಿನಿಯಮದಂತೆ ನಿಗದಿತ ಅವಧಿಯೊಳಗೆ ರಾಜೀನಾಮೆ ನೀಡಿರುವುದರಿಂದ ಅಧ್ಯಕ್ಷ ಸ್ಥಾನ ತೆರವಾಗಿರುವುದಾಗಿ ತಿಳಿಸಿರುವ ಜಿಲ್ಲಾಧಿಕಾರಿಗಳು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಅಧಿಕೃತ ಆದೇಶ ಪತ್ರವನ್ನು ಹೊರಡಿಸಿದ್ದಾರೆ. 

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ಆದಾಪುರ ವೀರಭದ್ರಪ್ಪ ಮುಂದಿನ ಮೂರು ತಿಂಗಳ ಅವಧಿಗೆ ಅಧ್ಯಕ್ಷರಾಗುವ ಸಾಧ್ಯತೆ ಹೆಚ್ಚಾಗಿದ್ದು, ಕಾದು ನೋಡಬೇಕಾಗಿದೆ.

error: Content is protected !!