ನೊಳಂಬ ಲಿಂಗಾಯತ ಸಂಘದ ಅಧ್ಯಕ್ಷರಾಗಿ ಎಸ್.ಆರ್. ಪಾಟೀಲ್‌

ಮಲೇಬೆನ್ನೂರು, ಮಾ.12- ನೊಳಂಬ ಲಿಂಗಾಯತ ಸಂಘದ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಖ್ಯಾತ ವಕೀಲರಾದ ಎಸ್.ಆರ್. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ನೂತನ ನಿರ್ದೇಶಕರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ರಾಮಲಿಂಗಪ್ಪ, ಬಿ.ಕೆ. ಚಂದ್ರಶೇಖರ್, ಎಸ್.ಆರ್. ನಟರಾಜ್, ಕಾರ್ಯದರ್ಶಿ ಬಿ.ಕೆ. ಶಶಿಧರ್, ಜಂಟಿ ಕಾರ್ಯದರ್ಶಿ ಎಸ್.ಜಿ. ಧನಂಜಯ, ಸಿದ್ದರಾಮೇಗೌಡ, ಕುಬೇರಪ್ಪ, ಖಜಾಂಚಿಯಾಗಿ ಕೆ.ಬಿ. ರುದ್ರಪ್ಪ ಆಯ್ಕೆಯಾಗಿದ್ದಾರೆ.

ಕೇಂದ್ರ ಸಮಿತಿಗೆ ದಾವಣಗೆರೆ ಜಿಲ್ಲೆಯಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ಡಾ. ಡಿ.ಬಿ. ಗಂಗಪ್ಪ, ನಿವೃತ್ತ ಇಂಜಿನಿಯರ್ ಸಿ.ಬಿ. ಈಶ್ವರಪ್ಪ ಸೇರಿದಂತೆ ಎಲ್ಲಾ 41 ನಿರ್ದೇಶಕರು ಸಭೆಯಲ್ಲಿ ಹಾಜರಿದ್ದರು.

error: Content is protected !!