ಸಾರ್ವಜನಿಕರು ನದಿ ಪಾತ್ರಕ್ಕೆ ಇಳಿಯದಂತೆ ಎಚ್ಚರಿಕೆ

ದಾವಣಗೆರೆ, ಮಾ. 18-  ಭದ್ರಾ ಜಲಾಶಯದಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳನ್ನು ಸಂರಕ್ಷಿಸಲು ಸುಮಾರು 1.60 ಟಿ.ಎಂ.ಸಿ ನೀರನ್ನು ತುಂಗಭದ್ರಾ ನದಿಗೆ  ಏ.1 ರವರೆಗೆ ಪ್ರತಿದಿನ 1200 ಕ್ಯೂಸೆಕ್ಸ್‍ನಂತೆ ಭದ್ರಾ ನದಿಗೆ ಹರಿಸಲಾಗುವುದು. ಆದ್ದರಿಂದ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲೀ, ದನಕರುಗಳನ್ನು ನದಿಗೆ ಇಳಿಸುವುದಾಗಲೀ ಇತ್ಯಾದಿ ಚಟುವಟಿಕೆಗಾಗಿ ನದಿ ಪಾತ್ರದಲ್ಲಿ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಹಾಗೂ ಈ ಅವಧಿಯಲ್ಲಿ ರೈತ ಬಾಂಧವರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‍ಸೆಟ್‍ಗಳಿಂದ ಅಕ್ರಮವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಬಿ.ಆರ್.ಪ್ರಾಜೆಕ್ಟ್‍ನ ಕ.ನೀ.ನಿ.ನಿ.ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರ ಎಂ.ಚಂದ್ರಹಾಸ ತಿಳಿಸಿದ್ದಾರೆ.

error: Content is protected !!