ಉಕ್ಕಡಗಾತ್ರಿ : ಫಳಾರಕ್ಕೆ ಚಾಲನೆ ಇಂದು ಬೆಳ್ಳಿ ತೇರು, ಪಾಲಿಕೋತ್ಸವ

ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ  ಇಂದು ಬೆಳಿಗ್ಗೆ 9 ಗಂಟೆಗೆ ಅಜ್ಜಯ್ಯನ ಬೆಳ್ಳಿ ರಥೋತ್ಸವ ಜರುಗಲಿದೆ.

ಗುರುವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಅಜ್ಜಯ್ಯನಿಗೆ ವಿಶೇಷ ರಾಜೋಪಚಾರ ಮಹಾಪೂಜೆ ನೆರವೇರಿಸಿದ ನಂತರ ಫಳಾರ ಹಾಕಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 

ನಾಡಿದ್ದು ಶನಿವಾರ ಭಕ್ತರಿಗೆ ಅಜ್ಜಯ್ಯನ ಫಳಾರ ಹಂಚುವ ಮೂಲಕ ಜಾತ್ರೆಗೆ ತೆರೆ ಎಳೆಯಲಾಗುವುದು.

error: Content is protected !!