ಬಿಜೆಪಿ ಸರ್ಕಾರ ಹಗಲು ದರೋಡೆ ಮಾಡುತ್ತಿದೆ

ಜಿ.ಪಂ. ಸದಸ್ಯ ಕೆ.ಎಸ್. ಬಸವಂತಪ್ಪ ಆಕ್ರೋಶ

ದಾವಣಗೆರೆ, ಜೂ 14 –  ತೈಲ ಬೆಲೆಗಳನ್ನು ಏರಿಸಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಪಂಚಾಯತ್‍ ಸದಸ್ಯ ಕೆ.ಎಸ್.ಬಸವಂತಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ನಿಂದ ಮಾಯಕೊಂಡದ ಪೆಟ್ರೋಲ್ ಬಂಕ್ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಸವಂತಪ್ಪ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೈಲ ಬೆಲೆಗಳನ್ನು ಹೆಚ್ಚಳ ಮಾಡುವುದರ ಮುಖಾಂತರ ಹಗಲು ದರೋಡೆ ಮಾಡುತ್ತಿವೆ. ತೈಲ ಬೆಲೆ ಹೆಚ್ಚಳದಿಂದ ರೈತರ ಜೀವನ ಅಸ್ತವ್ಯಸ್ತವಾಗಿದ್ದು, ಜಮೀನು ಉಳುಮೆ ಮಾಡಲು ಟ್ರ್ಯಾಕ್ಟರ್ ದರವೂ ಹೆಚ್ಚಳವಾಗಿದೆ. ಇದರಿಂದ ರೈತರು ಉಳುಮೆ ಮಾಡದೇ ಇರುವಂತಹ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಸರ್ಕಾರ ಈ ಕೂಡಲೇ ಎಲ್ಲಾ ಗೃಹ ಬಳಕೆ ವಸ್ತುಗಳ ಬೆಲೆಗಳನ್ನು ಇಳಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ, ಎಪಿಎಂಸಿ ಮಾಜಿ‌ ಅಧ್ಯಕ್ಷ ರಾಜೇಂದ್ರ, ಕಾಂಗ್ರೆಸ್ ಹಿರಿಯ ಮುಖಂಡ ರುದ್ರೇಶ್, ಗ್ರಾಪಂ‌ ಮಾಜಿ ಅಧ್ಯಕ್ಷ ಲಕ್ಷ್ಮಣರಾವ್, ಅಣ್ಣಾಪುರದ ಹೇಮಣ್ಣ, ನರೇನಳ್ಳಿ ರುದ್ರೆಶ್, ಪರಶುರಾಮ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

error: Content is protected !!