ಎಟಿಎಂ ಹಣ ದೋಚಲು ವಿಫಲ ಯತ್ನ

ದಾವಣಗೆರೆ, ಮಾ.22- ಎಟಿಎಂ ಯಂತ್ರದ ಮೇಲೆ ಕಲ್ಲು ಎತ್ತಿ ಹಾಕಿ ಹಣ ದೋಚಲು ಕಳ್ಳರು ವಿಫಲ ಯತ್ನ ನಡೆಸಿರುವ ಘಟನೆ ನಗರದ ವಿವೇಕಾನಂದ ಬಡಾವಣೆಯ ಬಿಐಇಟಿ ಕಾಲೇಜು ಬಳಿ ಭಾನುವಾರ ರಾತ್ರಿ ನಡೆದಿದೆ.

ಎಕ್ಸಿಸ್ ಬ್ಯಾಂಕ್‍ಗೆ ಸೇರಿದ ಎಟಿಎಂನಿಂದ ಹಣ ದೋಚಲು ವಿಫಲ ಯತ್ನ ನಡೆಸಿದ್ದು, ಈ ಕೃತ್ಯ ನಡೆದಿರುವ ಬಗ್ಗೆ ಇಂದು ಬೆಳಿಗ್ಗೆ ಗಸ್ತಿನಲ್ಲಿದ್ದ ಪೊಲೀಸರಿಗೆ ಕಂಡು ಬಂದಿದ್ದು, ಬಳಿಕ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳು ಬಂದು ಪರಿಶೀಲಿಸಿದ್ದಾರೆ. 

ಅಲ್ಲದೇ, ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!