ಹಡಗಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ : 48 ಅರ್ಜಿಗಳಿಗೆ ಮುಕ್ತಿ

ಹೂವಿನಹಡಗಲಿ,ಮಾ.24- ತಾಲ್ಲೂಕಿನ ಮಹಾಜನದಹಳ್ಳಿಯಲ್ಲಿ  ಕಂದಾಯ ಇಲಾಖೆ ಆಯೋಜಿಸಿದ್ದ `ಅಧಿಕಾರಿಗಳ ನಡೆ ಗ್ರಾಮದ ಕಡೆ’ ಕಾರ್ಯಕ್ರಮದ ಸಂದರ್ಭದಲ್ಲಿ ಸಲ್ಲಿಕೆಯಾಗಿದ್ದ 172 ಅರ್ಜಿಗಳ ಪೈಕಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 48 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯಥ೯ ಪಡಿಸಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ 24 ಮಂದಿ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಲಾಗಿದೆ ತಾಲ್ಲೂಕು ಪಂಚಾಯಿತಿ 12 ಮತ್ತು ತೋಟಗಾರಿಕೆ ಇಲಾಖೆಯಿಂದ 8, ಭೂಮಾಪನ ಇಲಾಖೆ ಸಂಬಂಧಿಸಿದ 4  ಅರ್ಜಿಗಳ ಸಮಸ್ಯೆಯನ್ನು ಅಧಿಕಾರಿಗಳು ಸ್ಥಳದಲ್ಲಿಯೇ ಪರಿಹರಿಸಿದ್ದಾರೆ. 

ಹರಪನಹಳ್ಳಿ ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ ಮಾತನಾಡಿ, ವೈಯಕ್ತಿಕ ಸಮಸ್ಯೆಗಳ ಬಗ್ಗೆ ಜನರು ಅರ್ಜಿ ಸಲ್ಲಿಸಬಹುದಾಗಿದೆ. ಈ ಕಾರ್ಯಕ್ರಮ ಬಳಕೆ ಮಾಡಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು. ವಿವಿಧ ಅಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ, ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು. 

error: Content is protected !!