ದಾವಣಗೆರೆ, ಜೂ.27- ಲಾಕ್ಡೌನ್ ಸಂದರ್ಭದಲ್ಲಿ ಉದ್ಯೋಗವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಬೀಡಿ ಕಾರ್ಮಿಕರಿಗೆ ನೆರಳು ಬೀಡಿ ಕಾರ್ಮಿಕರ ವತಿಯಿಂದ ಆಹಾರ ಧಾನ್ಯದ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ನ್ಯಾಯವಾದಿ ಎಲ್.ಹೆಚ್. ಅರುಣ್ ಕುಮಾರ್ ಪ್ರಶಂಸಿಸಿದರು.
ನೆರಳು ಬೀಡಿ ಕಾರ್ಮಿಕರ ಯೂನಿಯನ್ ವತಿಯಿಂದ ಬೀಡಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆಗೆ ಎಸ್ಎಸ್ಎಂ ನಗರದಲ್ಲಿ ಚಾಲನೆ ನೀಡಲಾಯಿತು.
ನೆರಳು ಬೀಡಿ ಕಾರ್ಮಿಕರ ಯೂನಿಯನ್ ಅಧ್ಯಕ್ಷರಾದ ಜಬೀನಾ ಖಾನಂ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೂನಿಯನ್ ಕಾರ್ಯದರ್ಶಿ ಕರಿಬಸಪ್ಪ ಎಂ, ಪದಾಧಿಕಾರಿಗಳಾದ ನಾಹೇರ್ ಬಾನು, ಶಿರಿನ್ ಬಾನು, ನೂರ್ ಫಾತಿಮಾ, ಸಬರೀನ್ ತಾಜ್, ನಗೀನಾ ಬಾನು ಮತ್ತಿತರರು ಉಪಸ್ಥಿತರಿದ್ದರು.