ಶಿಕ್ಷಕರಿಗೆ ಆಹಾರ ಧಾನ್ಯ ಕಿಟ್ ವಿತರಣೆ

ದಾವಣಗೆರೆ, ಆ.5- ಕೋವಿಡ್ ಹಿನ್ನೆಲೆಯಲ್ಲಿ ಆದ ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾದ ಶಿಕ್ಷಕರಿಗೆ ದೇವರಬೆಳಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ಹೆಚ್.ಕೆ.ನಾಗರತ್ನಮ್ಮ ಅವರು ಆಹಾರ ಧಾನ್ಯಗಳ ಕಿಟ್ ವಿತರಿಸಿದರು. ಜನತಾ ವಿದ್ಯಾಲಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಿಇಒ ಕೊಟ್ರೇಶ್, ಹೆಚ್.ಎಂ.ಜಗದೇವಯ್ಯ, ಎ.ಎಂ.ಪ್ರಶಾಂತ್, ಶಿಕ್ಷಕ ಎ.ಎಂ.ವಿನಯ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!