ಯಕ್ಕನಹಳ್ಳಿಯಲ್ಲಿ ಬಸವೇಶ್ವರ ತೇರು

ಹೊನ್ನಾಳಿ, ಮಾ.25 – ತಾಲ್ಲೂಕಿನ ಯಕ್ಕನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವರ ರಥೋತ್ಸವ ಇಂದು ಬೆಳಗಿನಜಾವ ನಡೆಯಿತು. ರಥೋತ್ಸವದ ಸಂದರ್ಭದಲ್ಲಿ ಭಕ್ತರು ಮಂಡಕ್ಕಿ, ಮೆಣಸಿನಕಾಳು, ಬಾಳೆಹಣ್ಣು ಎರಚುವ ಹಾಗೂ ಒಣ ಕೊಬ್ಬರಿ ಸುಡುವ ಮೂಲಕ ಭಕ್ತಿ ಸಮರ್ಪಿಸಿದರು.

ಸಂಜೆ ಗ್ರಾಮದ ರೈತರು ತಮ್ಮ ಎತ್ತುಗಳನ್ನು ಶೃಂಗರಿಸಿ ಮೆರವಣಿಗೆ ನಡೆಸಿದರು. ರಾತ್ರಿ 7ಕ್ಕೆ ಶ್ರೀ ಬಸವೇಶ್ವರ ದೇವರ ಅಡ್ಡಪಲ್ಲಕ್ಕಿ ಉತ್ಸವ ವಿವಿಧ ವಾದ್ಯಮೇಳಗಳೊಂದಿಗೆ ರಾಜ ಬೀದಿಗಳಲ್ಲಿ ನಡೆಯಿತು

error: Content is protected !!