ಹೊಳೆಸಿರಿಗೆರೆ : ಶಾಲೆಗೆ ಬಣ್ಣ ಬಳಿದು ಸ್ವಚ್ಚತೆಗೆ ಚಾಲನೆ

ಮಲೇಬೆನ್ನೂರು, ನ.16 – ಮಕ್ಕಳ ದಿನಾಚರಣೆ ಹಾಗೂ ಕೇಂದ್ರದ ಮಾಜಿ ಸಚಿವ ಕೊಂಡಜ್ಜಿ ಬಸಪ್ಪನ ವರ ಪುಣ್ಯ ಸ್ಮರಣೆ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್‍ ಕೊಂಡಜ್ಜಿ  ಅವರ ನೇತೃತ್ವದಲ್ಲಿ ಹೊಳೆ ಸಿರಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳಿಗೆ ಬಣ್ಣ ಬಳಿದು ಸ್ವಚ್ಛತೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಹಾಜರಿದ್ದು ಮಾತನಾಡಿದ ಜಿ.ಪಂ ಮಾಜಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ ಅವರು, ನಿಖಿಲ್ ಕೊಂಡಜ್ಜಿ ಅವರ ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಹರಿಹರ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಈ ರೀತಿ ಕಾರ್ಯಕ್ರಮ ಮಾಡಿ ಎಂದು ಸಲಹೆ ನೀಡಿದರು.

ಎಪಿಎಂಸಿ ಅಧ್ಯಕ್ಷ ಜಿ. ಮಂಜುನಾಥ್ ಪಟೇಲ್, ಡಿಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಜಿಗಳಿ ಆನಂದಪ್ಪ, ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್, ನಿವೃತ್ತ ಸೈನಿಕ ಎನ್. ಪರಶುರಾಮಪ್ಪ, ಶಾಲೆ ಮುಖ್ಯ ಶಿಕ್ಷಕ ಪಾಲಾಕ್ಷಪ್ಪ ಮಾತನಾಡಿದರು.

ಗ್ರಾ.ಪಂ. ಸದಸ್ಯ ವಿನಾಯಕ, ಬಿ. ಶೇಖರಪ್ಪ, ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಗುಳೇಶ್, ಸಾಕ್ಷರತಾ ಸಂಯೋಜಕ ಎಂ. ಶಿವಕುಮಾರ್, ಬಿ.ಶಿವಕುಮಾರ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಕುಂಬಳೂರು ವಾಸು, ಮಲೇಬೆನ್ನೂರು ಪಿಎಸಿಎಸ್ ಅಧ್ಯಕ್ಷ ಪಿ.ಆರ್. ಕುಮಾರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಬೋವಿ ಕುಮಾರ್, ಪುರಸಭೆ ಮಾಜಿ ಸದಸ್ಯ ಎ.ಆರೀಫ್ ಅಲಿ, ಬುಕ್‍ ಸ್ಟಾಲ್ ಶಿವಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ರಂಜಿತ್, ನವೀನ್ ನೆಲವಾಡಿ, ಬಾಷಾ, ಪವನ್, ಸೈಯದ್ ಮಲ್ಲಿಕ್, ಗೌಸ್‍, ತಿಪ್ಪೇಶ್ ಮತ್ತಿತರರು ಭಾಗವಹಿಸಿದ್ದರು.

error: Content is protected !!